ಜಿಲ್ಲೆಗಳು

ಹನೂರು : ಮಳೆ ಹಾನಿ ಪ್ರದೇಶಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್ ಭೇಟಿ, ಪರಿಶೀಲನೆ

ಹನೂರು: ಸಮೀಪದ ಕುರುಬರದೊಡ್ಡಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದ ಸ್ಥಳಕ್ಕೆ ಭಾನುವಾರ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಧೈರ್ಯ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಗ್ರಾಮದಲ್ಲಿ ಕೆಲವು ಕಡೆ ಚರಂಡಿಯನ್ನು ವೈಜ್ಞಾನಿಕವಾಗಿ ನಿರ್ಮಿಸಲಾಗಿಲ್ಲ. ಈತನ್ಮಧ್ಯೆ ಸಂಬಂಧಪಟ್ಟ ಅಧಿಕಾರಿಗಳು ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬೇಕಾದರೆ ಮುನ್ನೆಚ್ಚರಿಕೆಯ ಬಗ್ಗೆ ಕ್ರಮವಹಿಸಿಲ್ಲ. ಆಗಾಗಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ.
ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಕೂಡಲೇ ಅಗತ್ಯ ಕ್ರಮಕೈಗೊಂಡು ಹಾನಿಯಾದ ಮನೆಗಳಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದರಲ್ಲದೇ ನಿಮ್ಮ ನೆರವಿಗೆ ನಾನಿದ್ದೇನೆ ಎಂದು ಅಭಯ ಹಸ್ತ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು , ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

19 seconds ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

56 mins ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

1 hour ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

2 hours ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

2 hours ago

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ…

3 hours ago