ಹನೂರು : ಗುರುವಾರ ತಡರಾತ್ರಿ ಸುರಿದ ಬಾರಿ ಮಳೆಗೆ ಕುರುಬರದೊಡ್ಡಿ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದ ಪರಿಣಾಮ ಮನೆಗಳಿಗೆ ನೀರು ನುಗ್ಗಿರುವ ಘಟನೆ ಜರುಗಿದೆ.
ಅಜ್ಜೀಪುರ ಹಾಗೂ ಸೂಳೇರಿಪಾಳ್ಯ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಭಾರಿ ಮಳೆಯಾದ ಹಿನ್ನೆಲೆ ಹಾಗೂ ಉಡುತೊರೆಹಳ್ಳ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವ ಹಿನ್ನೆಲೆ ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರದೊಡ್ಡಿ ಗ್ರಾಮದ ನಾಲ್ಕನೇ ವಾರ್ಡ್ ನ ಮನೆಗಳಿಗೆ ನೀರು ನುಗ್ಗಿ ದಿನಸಿ ಪದಾರ್ಥಗಳು ಸೇರಿದಂತೆ ಗೃಹೋಪಯೋಗಿ ವಸ್ತುಗಳು ನಾಶಗೊಂಡಿವೆ.
ಮನೆಗಳಿಗೆ ಹಾನಿ : ಕುರುಬರದೊಡ್ಡಿ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಪುಟ್ಟಮ್ಮ,ಶಿವಣ್ಣ, ಹುಚ್ಚಮ್ಮ, ಲಕ್ಷ್ಮಣ, ಚಜ್ಜೆಗೌಡರು, ಕೆಂಪಮ್ಮ,ಇವರುಗಳ ಮನೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದು ಬಾರಿ ಪ್ರಮಾಣದಲ್ಲಿ ಹಾನಿಯಾಗುವ ಮುನ್ಸೂಚನೆ ಇದೆ ಅಲ್ಲದೆ ಪ್ರತಿ ಬಾರಿ ಮಳೆಯಾದಾಗ ಈ ರೀತಿಯಲ್ಲಿ ಘಟನೆ ಮರುಕಳಿಸುತ್ತಿದೆ ಆದರೂ ಎಚ್ಛೆತ್ತುಕೊಳ್ಳುತ್ತಿಲ್ಲ ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಡರಾತ್ರಿ ಮನೆಗಳಿಗೆ ನೀರು ನುಗ್ಗಿದ್ದರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಆದರೆ ಮನೆಯೊಳಗೆ ಮೂರರಿಂದ 4 ಅಡಿ ನೀರು ತುಂಬಿರುವುದರಿಂದ ಮುಂಜಾನೆಯಿಂದಲೂ ನೀರನ್ನು ಹೊರಗೆ ಹಾಕುವುದೇ ಆಗಿದೆ ಆದರೇ ಇನ್ನೂ ನೀರು ನಿಲ್ಲುತ್ತಿಲ್ಲ ನಮ್ಮ ಮನೆಗೆ ಹಾನಿಯಾಗಿದೆ ಈಗಾಗಲೇ ಒಂದು ಕಡೆ ಗೋಡೆ ಕುಸಿದಿದೆ ಎಂದು ಗ್ರಾಮದ ಹುಚ್ಚಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಅಪಾರ ಪ್ರಮಾಣದ ಮಳೆ ಬಿದ್ದರೆ ನಮ್ಮ ಮನೆಗಳಿಗೆ ಪದೇ ಪದೇ ಈ ರೀತಿ ನೀರು ನುಗ್ಗುತ್ತಿದೆ ಇದಕ್ಕೆ ಸಂಬಂಧ ಪಟ್ಟಂತೆ ಸಾಕಷ್ಟು ಬಾರಿ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಪ್ರಯೋಜನವಾಗಿವಿಲ್ಲ,ಶೀಘ್ರವೇ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ ಹಾದಿ ಹಿಡಿಯಬೇಕಾಗುತ್ತದೆ.
ಶಂಕರ್
ಕುರುಬರದೊಡ್ಡಿ ನಿವಾಸಿ.
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…