Mysore
25
light rain

Social Media

ಶನಿವಾರ, 13 ಜೂನ್ 2026
Light
Dark

ಹನೂರು : ಮಾಜಿ ಶಾಸಕಿ ಪರಿಮಳ ನಾಗಪ್ಪ & ಬಿ. ವೆಂಕಟೇಶ್ ಬೆಂಬಲಿಗರ ನಡುವೆ ಮಾತಿನ ಚಕಮಕಿ

ಹನೂರು: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್ ಸಿ ಮೋರ್ಚಾ ಸಭೆಯಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ಬೆಂಬಲಿಗರು ಮಾತಿನ ಚಕಮಕಿ ನಡೆಸಿ ವಾಗ್ವಾದ ನಡೆಸಿದ್ದಾರೆ.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಎಸ್ ಸಿ ಮೋರ್ಚಾ ಸಭೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಎಸ್ ಸಿ ಮೋರ್ಚಾ ಅಧ್ಯಕ್ಷ ರುಗಳು ಪದಾಧಿಕಾರಿಗಳನ್ನು ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಜನಧ್ವನಿ ಬಿ ವೆಂಕಟೇಶ್ ಅವರನ್ನೂ ಕರೆದಿರಲಿಲ್ಲ ಆದರೆ ಸಭೆಗೆ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಪ್ರೀತಂ ನಾಗಪ್ಪ ಆಗಮಿಸಿದ ಹಿನ್ನೆಲೆ ಜನಧ್ವನಿ ಬಿ ವೆಂಕಟೇಶ್ ರವರ ಬೆಂಬಲಿಗರು ನಾಯಕರುಗಳ ಜತೆ ವಾಗ್ವಾದ ನಡೆಸಿ ಹರಿಹಾಯ್ದಿದ್ದಾರೆ.
ಕಳೆದ ತಿಂಗಳು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹನೂರು ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಪಕ್ಷ ಯಾರಿಗಾದರೂ ಟಿಕೆಟ್ ನೀಡಲಿ ಅಲ್ಲಿಯವರೆಗೆ ಪರಿಮಳ ನಾಗಪ್ಪ,ಜನಧ್ವನಿ ಬಿ ವೆಂಕಟೇಶ್ ಡಾ. ದತ್ತೇಶ್ ಕುಮಾರ್, ಪ್ರೀತಂ ನಾಗಪ್ಪ ಎಲ್ಲಾ ನಾಯಕರುಗಳು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಾಗುವಂತೆ ವರಿಷ್ಠರು ಆದೇಶ ನೀಡಿದ್ದರು. ಈ ಹಿನ್ನೆಲೆ ಹನೂರು ಪಟ್ಟಣದಲ್ಲಿ ನರೇಂದ್ರ ಮೋದಿ ರವರ ಹುಟ್ಟುಹಬ್ಬದ ಪ್ರಯುಕ್ತ ಒಬಿಸಿ ಮೋರ್ಚಾ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದರು.ಆದರೆ ವರಿಷ್ಠರು ಸೂಚನೆ ನೀಡಿ ಇನ್ನೂ ಸಹ 1ತಿಂಗಳು ಕಳೆದಿಲ್ಲ ಆಗಲೇ ಬಣ ರಾಜಕೀಯ ಭುಗಿಲೆದ್ದು ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!