ಜಿಲ್ಲೆಗಳು

ಹನೂರು : ಮಾಜಿ ಶಾಸಕಿ ಪರಿಮಳ ನಾಗಪ್ಪ & ಬಿ. ವೆಂಕಟೇಶ್ ಬೆಂಬಲಿಗರ ನಡುವೆ ಮಾತಿನ ಚಕಮಕಿ

ಹನೂರು: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್ ಸಿ ಮೋರ್ಚಾ ಸಭೆಯಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ಬೆಂಬಲಿಗರು ಮಾತಿನ ಚಕಮಕಿ ನಡೆಸಿ ವಾಗ್ವಾದ ನಡೆಸಿದ್ದಾರೆ.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಎಸ್ ಸಿ ಮೋರ್ಚಾ ಸಭೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಎಸ್ ಸಿ ಮೋರ್ಚಾ ಅಧ್ಯಕ್ಷ ರುಗಳು ಪದಾಧಿಕಾರಿಗಳನ್ನು ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಜನಧ್ವನಿ ಬಿ ವೆಂಕಟೇಶ್ ಅವರನ್ನೂ ಕರೆದಿರಲಿಲ್ಲ ಆದರೆ ಸಭೆಗೆ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಪ್ರೀತಂ ನಾಗಪ್ಪ ಆಗಮಿಸಿದ ಹಿನ್ನೆಲೆ ಜನಧ್ವನಿ ಬಿ ವೆಂಕಟೇಶ್ ರವರ ಬೆಂಬಲಿಗರು ನಾಯಕರುಗಳ ಜತೆ ವಾಗ್ವಾದ ನಡೆಸಿ ಹರಿಹಾಯ್ದಿದ್ದಾರೆ.
ಕಳೆದ ತಿಂಗಳು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹನೂರು ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಪಕ್ಷ ಯಾರಿಗಾದರೂ ಟಿಕೆಟ್ ನೀಡಲಿ ಅಲ್ಲಿಯವರೆಗೆ ಪರಿಮಳ ನಾಗಪ್ಪ,ಜನಧ್ವನಿ ಬಿ ವೆಂಕಟೇಶ್ ಡಾ. ದತ್ತೇಶ್ ಕುಮಾರ್, ಪ್ರೀತಂ ನಾಗಪ್ಪ ಎಲ್ಲಾ ನಾಯಕರುಗಳು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಾಗುವಂತೆ ವರಿಷ್ಠರು ಆದೇಶ ನೀಡಿದ್ದರು. ಈ ಹಿನ್ನೆಲೆ ಹನೂರು ಪಟ್ಟಣದಲ್ಲಿ ನರೇಂದ್ರ ಮೋದಿ ರವರ ಹುಟ್ಟುಹಬ್ಬದ ಪ್ರಯುಕ್ತ ಒಬಿಸಿ ಮೋರ್ಚಾ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದರು.ಆದರೆ ವರಿಷ್ಠರು ಸೂಚನೆ ನೀಡಿ ಇನ್ನೂ ಸಹ 1ತಿಂಗಳು ಕಳೆದಿಲ್ಲ ಆಗಲೇ ಬಣ ರಾಜಕೀಯ ಭುಗಿಲೆದ್ದು ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ.

andolanait

Recent Posts

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…

3 mins ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

8 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

8 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

8 hours ago