ಜಿಲ್ಲೆಗಳು

ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದವರು ದಿ. ಎಚ್ ನಾಗಪ್ಪ : ಶ್ರೀ ಸಿದ್ದಲಿಂಗ ಸ್ವಾಮೀಜಿ

ಹನೂರು; ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡುವುದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದ ದಿ. ನಾಗಪ್ಪ ಅವರ ಕುಟುಂಬಕ್ಕೆ ತಮ್ಮೆಲ್ಲರ ಆಶೀರ್ವಾದ ಅಗತ್ಯವಾಗಿದೆ ಎಂದು ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದರು.

ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದ ಬಳಿ ಕಾಮಗೆರೆ ಶ್ರೀ ಹೆಚ್. ನಾಗಪ್ಪ ಪ್ರತಿಷ್ಠಾನ ವತಿಯಿಂದ ಆಯೋಜಿಸಿದ್ಧ ದಿವಂಗತ ಹೆಚ್. ನಾಗಪ್ಪ ಅವರ 20ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನರಹಂತಕ ವೀರಪ್ಪನ್ ಸಚಿವರಾಗಿದ್ದ ನಾಗಪ್ಪ ಅವರನ್ನು ಹತ್ಯೆಗೈದಿರುವುದು ನೋವಿನ ಸಂಗತಿ. ಇವರ ಅಗಲಿಕೆ ಕುಟುಂಬಕ್ಕೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಅನ್ವಯಿಸಿದೆ. ಇವರು ಅದರೂ ಆದರ್ಶದ ಬದುಕನ್ನು ರೂಪಿಸಿಕೊಳ್ಳುವುದರ ಮೂಲಕ ಎಲ್ಲರನ್ನು ಪ್ರೀತಿಸುವ ಗುಣವನ್ನು ಹೊಂದಿದ್ದ ಇವರು ಶಾಸಕ, ಸಚಿವರಾಗಿ ಹನೂರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದ್ದು, ತಮ್ಮದೇಯಾದ ಕನಸನ್ನು ಕಟ್ಟಿಕೊಂಡಿದ್ದರು. ಆದ್ದರಿಂದ ನಾಗಪ್ಪ ಅವರ ಆಶಯ ಈಡೇರಬೇಕಾದರೆ ಪುತ್ರ ಡಾ.ಪ್ರೀತನ್ ನಾಗಪ್ಪ ಅವರಿಗೆ ತಮ್ಮೆಲ್ಲರ ಪ್ರೀತಿ, ಆಶೀರ್ವಾದ ಅತ್ಯಗತ್ಯವಾಗಿದೆ. ಹಾಗಾಗಿ ಅವರಿಗೆ ಸಹಕಾರ ನೀಡುವಂತೆ ತಿಳಿಸಿದರು.

ಮರಳೇಗವಿ ಮಠದ ಶ್ರೀ ಮುಮ್ಮಡಿ ಶಿವರುದ್ರ ಸ್ವಾಮೀಜಿ ಮಾತನಾಡಿ, ಹನೂರು ಕ್ಷೇತ್ರವನ್ನು ಅಭಿವೃದ್ಧಿ ಮಾಡಬೇಕೆಂದು ಕನಸು ಕಂಡಿದ್ದ ದಿ.ನಾಗಪ್ಪ ಅವರನ್ನು ಇದೀಗ ಪುತ್ರ ಡಾ.ಪ್ರೀತನ್ ನಾಗಪ್ಪ ಅವರಲ್ಲಿ ಕಂಡಾಗ ಅವರ ಕನಸು ಈಡೇರುತ್ತದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಮನಸ್ಸನ್ನು ಶುದ್ಧಿ ಮಾಡಿಕೊಳ್ಳಬೇಕಿದೆ. ಈ ಮೂಲಕ ಕ್ಷೇತ್ರದಲ್ಲಿ ಬದಲಾವಣೆ ತರಬಹುದು. ಬದಲಾವಣೆ ಅಭಿವೃದ್ಧಿಯ ಪ್ರತೀಕ. ಆದ್ದರಿಂದ ನಾಗಪ್ಪ ಅವರ ಕುಟುಂಬಕ್ಕೆ ಆಶೀರ್ವಾದ ಅಗತ್ಯ ಎಂದರು.

ಸಂಸದ ವಿ. ಶ್ರೀನಿವಾಸ್ ಮಾತನಾಡಿ, ರಾಜಕೀಯಕ್ಕೆ ಪ್ರವೇಶಿಸಿ 50 ವರ್ಷಗಳಾಗಿದ್ದು, ಸತತ 9 ಬಾರಿ ಗೆದ್ದಿದ್ದೇನೆ. ಈ ಅವಧಿಯಲ್ಲಿ ಸಾಕಾಷ್ಟು ಏಳುಬೀಳನ್ನು ಕಂಡಿದ್ದೇನೆ. ಆದರೂ ನನ್ನ ತತ್ವಕ್ಕೆ ಅನುಗುಣವಾಗಿ ಸ್ವಾಭಿಮಾನಿಯಾಗಿ ಕೆಲಸ ಮಾಡಿದ್ದೇನೆ. ಚುನಾವಣೆಯ ವೇಳೆ ಹನೂರು ಭಾಗಕ್ಕೆ ಅಗಮಿಸಿದ್ದ ವೇಳೆ ನನಗೆ ಹಳ್ಳಿಗಳನ್ನು ಪರಿಚಯ ಮಾಡಿಸಿದವರು ದಿ.ನಾಗಪ್ಪ ಅವರು. ಆದ್ದರಿಂದ ಅವರ ನಿಸ್ವಾರ್ಥ ಸೇವೆ ನಮ್ಮೆಲ್ಲರಿಗೂ ಮಾದರಿ ಎಂದು ತಿಳಿಸಿದರು.

ಮಾಜಿ ಶಾಸಕಿ ಪರಿಮಳ ನಾಗಪ್ಪ ಮಾತನಾಡಿ ದಿವಂಗತ ಎಚ್ ನಾಗಪ್ಪ ರವರು ಮೃತ ಪಟ್ಟು 20 ವರ್ಷಗಳೆ ಕಳೆದರೂ ಕ್ಷೇತ್ರದ ಜನ ಅವರ ಮೇಲೆ ಇಟ್ಟಿರುವ ಅಭಿಮಾನ ಇಂದಿಗೂ ಕಡಿಮೆಯಾಗಿಲ್ಲ, ಈ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲರೂ ಬಂದಿರುವುದು ಸಂತಸದ ವಿಚಾರ, ಕಳೆದ ಮೂರು ಚುನಾವಣೆಗಳಿಂದ ಸತತ ಸೋಲು ಕಂಡಿದ್ದೇವೆ ನನ್ನ ಮಗ ಪ್ರೀತಂನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನು ನಿಮ್ಮ ಮನೆ ಮಗ ಅವನಿಗೆ ಆಶೀರ್ವಾದ ಮಾಡಿ ನಾಗಪ್ಪನವರ ದೂರದೃಷ್ಟಿಯ ಕಾರ್ಯಕ್ರಮಗಳನ್ನು ಮುಂದುವರೆಸಲು ಸಹಕಾರ ನೀಡಿ ಎಂದು ಮನವಿ ಮಾಡಿದರು. ಕೆಲವು ಸಣ್ಣಪುಟ್ಟ ತಪ್ಪುಗಳಿಂದ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ, ನೊಂದಿದ್ದೇವೆ, ಹನೂರು ಕ್ಷೇತ್ರದ ಜನರ ನಿಮ್ಮ ವಿಶ್ವಾಸ, ನಿಮ್ಮ ಬೆಂಬಲದಿಂದ ನಾವು ಮುಂದಿನ ಹೆಜ್ಜೆ ಇಡುತ್ತೇವೆ, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕರನ್ನು ಆಯ್ಕೆ ಮಾಡಿ ಹನೂರು ಕ್ಷೇತ್ರದ ಮತದಾರರು ಪ್ರಜ್ಞಾವಂತರು ನೀವು ನನಗೆ ನೀಡಿದ ಅಲ್ಪಾವಧಿ ಸಮಯದಲ್ಲಿ ನನ್ನ ಕೈಲಾದ ಸೇವೆ ಮಾಡಿದ್ದೇನೆ ನನ್ನ ಮಗನು ಸಹ ಅದೇ ನಿಟ್ಟಿನಲ್ಲಿ ನಿಮ್ಮ ಸೇವೆ ಮಾಡಲು ಬೆಂಬಲಿಸಿ ಎಂದರು.

ಇದೇ ವೇಳೆ ನಾಗಪ್ಪ ಅವರ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ವಾಟಾಳು ಸೂರ್ಯ ಸಿಂಹಾಸನ ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಕುದೇರು ಮಠದ ಗುರುಶಾಂತ ಸ್ವಾಮೀಜಿ, ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಮುಡಿಗುಂಡ ವಿರಕ್ತ ಮಠದ ಶ್ರೀಕಂಠಸ್ವಾಮೀಜಿ, ಹರವೆ ಮಠದ ಸರ್ವಭೂಷಣ ಸ್ವಾಮೀಜಿ ಹಾಗೂ ಶಾಸಕರಾದ ಎನ್.ಮಹೇಶ್, ನಿರಂಜನ್ ಕುಮಾರ್, ಕೆ ಆರ್ ಐಡಿ ಎಲ್ ಅಧ್ಯಕ್ಷ ರುದ್ರೇಶ್, ತಮಿಳುನಾಡಿನ ಮಾಜಿ ಶಾಸಕ ಧರ್ಮಲಿಂಗಂ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಎಸ್ ದತ್ತೇಶ್‍ಕುಮಾರ್, ಮಾಜಿ ಶಾಸಕರುಗಳಾದ ಜಿ.ಎನ್ ನಂಜುಂಡಸ್ವಾಮಿ,ಡಾ. ಭಾರತೀ ಶಂಕರ್,ಪರಿಮಳ ನಾಗಪ್ಪ ಪುತ್ರ ಪ್ರೀತಮ್ ನಾಗಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಸಿದ್ದಪ್ಪ,ಕಾರ್ಯದರ್ಶಿ ಭರತ್ ಬಂಡಳ್ಳಿ, ಮುಖಂಡರಾದ ಬಿಕೆ ಶಿವಕುಮಾರ್, ಮಾಧ್ಯಮ ವಕ್ತಾರ ಕಾಮಗೆರೆ ಮಧು ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

11 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

12 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

12 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

12 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

12 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

12 hours ago