ಜಿಲ್ಲೆಗಳು

ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದವರು ದಿ. ಎಚ್ ನಾಗಪ್ಪ : ಶ್ರೀ ಸಿದ್ದಲಿಂಗ ಸ್ವಾಮೀಜಿ

ಹನೂರು; ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡುವುದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದ ದಿ. ನಾಗಪ್ಪ ಅವರ ಕುಟುಂಬಕ್ಕೆ ತಮ್ಮೆಲ್ಲರ ಆಶೀರ್ವಾದ ಅಗತ್ಯವಾಗಿದೆ ಎಂದು ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದರು.

ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದ ಬಳಿ ಕಾಮಗೆರೆ ಶ್ರೀ ಹೆಚ್. ನಾಗಪ್ಪ ಪ್ರತಿಷ್ಠಾನ ವತಿಯಿಂದ ಆಯೋಜಿಸಿದ್ಧ ದಿವಂಗತ ಹೆಚ್. ನಾಗಪ್ಪ ಅವರ 20ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನರಹಂತಕ ವೀರಪ್ಪನ್ ಸಚಿವರಾಗಿದ್ದ ನಾಗಪ್ಪ ಅವರನ್ನು ಹತ್ಯೆಗೈದಿರುವುದು ನೋವಿನ ಸಂಗತಿ. ಇವರ ಅಗಲಿಕೆ ಕುಟುಂಬಕ್ಕೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಅನ್ವಯಿಸಿದೆ. ಇವರು ಅದರೂ ಆದರ್ಶದ ಬದುಕನ್ನು ರೂಪಿಸಿಕೊಳ್ಳುವುದರ ಮೂಲಕ ಎಲ್ಲರನ್ನು ಪ್ರೀತಿಸುವ ಗುಣವನ್ನು ಹೊಂದಿದ್ದ ಇವರು ಶಾಸಕ, ಸಚಿವರಾಗಿ ಹನೂರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದ್ದು, ತಮ್ಮದೇಯಾದ ಕನಸನ್ನು ಕಟ್ಟಿಕೊಂಡಿದ್ದರು. ಆದ್ದರಿಂದ ನಾಗಪ್ಪ ಅವರ ಆಶಯ ಈಡೇರಬೇಕಾದರೆ ಪುತ್ರ ಡಾ.ಪ್ರೀತನ್ ನಾಗಪ್ಪ ಅವರಿಗೆ ತಮ್ಮೆಲ್ಲರ ಪ್ರೀತಿ, ಆಶೀರ್ವಾದ ಅತ್ಯಗತ್ಯವಾಗಿದೆ. ಹಾಗಾಗಿ ಅವರಿಗೆ ಸಹಕಾರ ನೀಡುವಂತೆ ತಿಳಿಸಿದರು.

ಮರಳೇಗವಿ ಮಠದ ಶ್ರೀ ಮುಮ್ಮಡಿ ಶಿವರುದ್ರ ಸ್ವಾಮೀಜಿ ಮಾತನಾಡಿ, ಹನೂರು ಕ್ಷೇತ್ರವನ್ನು ಅಭಿವೃದ್ಧಿ ಮಾಡಬೇಕೆಂದು ಕನಸು ಕಂಡಿದ್ದ ದಿ.ನಾಗಪ್ಪ ಅವರನ್ನು ಇದೀಗ ಪುತ್ರ ಡಾ.ಪ್ರೀತನ್ ನಾಗಪ್ಪ ಅವರಲ್ಲಿ ಕಂಡಾಗ ಅವರ ಕನಸು ಈಡೇರುತ್ತದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಮನಸ್ಸನ್ನು ಶುದ್ಧಿ ಮಾಡಿಕೊಳ್ಳಬೇಕಿದೆ. ಈ ಮೂಲಕ ಕ್ಷೇತ್ರದಲ್ಲಿ ಬದಲಾವಣೆ ತರಬಹುದು. ಬದಲಾವಣೆ ಅಭಿವೃದ್ಧಿಯ ಪ್ರತೀಕ. ಆದ್ದರಿಂದ ನಾಗಪ್ಪ ಅವರ ಕುಟುಂಬಕ್ಕೆ ಆಶೀರ್ವಾದ ಅಗತ್ಯ ಎಂದರು.

ಸಂಸದ ವಿ. ಶ್ರೀನಿವಾಸ್ ಮಾತನಾಡಿ, ರಾಜಕೀಯಕ್ಕೆ ಪ್ರವೇಶಿಸಿ 50 ವರ್ಷಗಳಾಗಿದ್ದು, ಸತತ 9 ಬಾರಿ ಗೆದ್ದಿದ್ದೇನೆ. ಈ ಅವಧಿಯಲ್ಲಿ ಸಾಕಾಷ್ಟು ಏಳುಬೀಳನ್ನು ಕಂಡಿದ್ದೇನೆ. ಆದರೂ ನನ್ನ ತತ್ವಕ್ಕೆ ಅನುಗುಣವಾಗಿ ಸ್ವಾಭಿಮಾನಿಯಾಗಿ ಕೆಲಸ ಮಾಡಿದ್ದೇನೆ. ಚುನಾವಣೆಯ ವೇಳೆ ಹನೂರು ಭಾಗಕ್ಕೆ ಅಗಮಿಸಿದ್ದ ವೇಳೆ ನನಗೆ ಹಳ್ಳಿಗಳನ್ನು ಪರಿಚಯ ಮಾಡಿಸಿದವರು ದಿ.ನಾಗಪ್ಪ ಅವರು. ಆದ್ದರಿಂದ ಅವರ ನಿಸ್ವಾರ್ಥ ಸೇವೆ ನಮ್ಮೆಲ್ಲರಿಗೂ ಮಾದರಿ ಎಂದು ತಿಳಿಸಿದರು.

ಮಾಜಿ ಶಾಸಕಿ ಪರಿಮಳ ನಾಗಪ್ಪ ಮಾತನಾಡಿ ದಿವಂಗತ ಎಚ್ ನಾಗಪ್ಪ ರವರು ಮೃತ ಪಟ್ಟು 20 ವರ್ಷಗಳೆ ಕಳೆದರೂ ಕ್ಷೇತ್ರದ ಜನ ಅವರ ಮೇಲೆ ಇಟ್ಟಿರುವ ಅಭಿಮಾನ ಇಂದಿಗೂ ಕಡಿಮೆಯಾಗಿಲ್ಲ, ಈ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲರೂ ಬಂದಿರುವುದು ಸಂತಸದ ವಿಚಾರ, ಕಳೆದ ಮೂರು ಚುನಾವಣೆಗಳಿಂದ ಸತತ ಸೋಲು ಕಂಡಿದ್ದೇವೆ ನನ್ನ ಮಗ ಪ್ರೀತಂನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನು ನಿಮ್ಮ ಮನೆ ಮಗ ಅವನಿಗೆ ಆಶೀರ್ವಾದ ಮಾಡಿ ನಾಗಪ್ಪನವರ ದೂರದೃಷ್ಟಿಯ ಕಾರ್ಯಕ್ರಮಗಳನ್ನು ಮುಂದುವರೆಸಲು ಸಹಕಾರ ನೀಡಿ ಎಂದು ಮನವಿ ಮಾಡಿದರು. ಕೆಲವು ಸಣ್ಣಪುಟ್ಟ ತಪ್ಪುಗಳಿಂದ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ, ನೊಂದಿದ್ದೇವೆ, ಹನೂರು ಕ್ಷೇತ್ರದ ಜನರ ನಿಮ್ಮ ವಿಶ್ವಾಸ, ನಿಮ್ಮ ಬೆಂಬಲದಿಂದ ನಾವು ಮುಂದಿನ ಹೆಜ್ಜೆ ಇಡುತ್ತೇವೆ, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕರನ್ನು ಆಯ್ಕೆ ಮಾಡಿ ಹನೂರು ಕ್ಷೇತ್ರದ ಮತದಾರರು ಪ್ರಜ್ಞಾವಂತರು ನೀವು ನನಗೆ ನೀಡಿದ ಅಲ್ಪಾವಧಿ ಸಮಯದಲ್ಲಿ ನನ್ನ ಕೈಲಾದ ಸೇವೆ ಮಾಡಿದ್ದೇನೆ ನನ್ನ ಮಗನು ಸಹ ಅದೇ ನಿಟ್ಟಿನಲ್ಲಿ ನಿಮ್ಮ ಸೇವೆ ಮಾಡಲು ಬೆಂಬಲಿಸಿ ಎಂದರು.

ಇದೇ ವೇಳೆ ನಾಗಪ್ಪ ಅವರ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ವಾಟಾಳು ಸೂರ್ಯ ಸಿಂಹಾಸನ ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಕುದೇರು ಮಠದ ಗುರುಶಾಂತ ಸ್ವಾಮೀಜಿ, ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಮುಡಿಗುಂಡ ವಿರಕ್ತ ಮಠದ ಶ್ರೀಕಂಠಸ್ವಾಮೀಜಿ, ಹರವೆ ಮಠದ ಸರ್ವಭೂಷಣ ಸ್ವಾಮೀಜಿ ಹಾಗೂ ಶಾಸಕರಾದ ಎನ್.ಮಹೇಶ್, ನಿರಂಜನ್ ಕುಮಾರ್, ಕೆ ಆರ್ ಐಡಿ ಎಲ್ ಅಧ್ಯಕ್ಷ ರುದ್ರೇಶ್, ತಮಿಳುನಾಡಿನ ಮಾಜಿ ಶಾಸಕ ಧರ್ಮಲಿಂಗಂ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಎಸ್ ದತ್ತೇಶ್‍ಕುಮಾರ್, ಮಾಜಿ ಶಾಸಕರುಗಳಾದ ಜಿ.ಎನ್ ನಂಜುಂಡಸ್ವಾಮಿ,ಡಾ. ಭಾರತೀ ಶಂಕರ್,ಪರಿಮಳ ನಾಗಪ್ಪ ಪುತ್ರ ಪ್ರೀತಮ್ ನಾಗಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಸಿದ್ದಪ್ಪ,ಕಾರ್ಯದರ್ಶಿ ಭರತ್ ಬಂಡಳ್ಳಿ, ಮುಖಂಡರಾದ ಬಿಕೆ ಶಿವಕುಮಾರ್, ಮಾಧ್ಯಮ ವಕ್ತಾರ ಕಾಮಗೆರೆ ಮಧು ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

8 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

10 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

13 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

13 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

13 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

16 hours ago