ಜಿಲ್ಲೆಗಳು

ಶೀಘ್ರದಲ್ಲೇ ಹನೂರು ಕ್ಷೇತ್ರದಲ್ಲಿ 12 ಪದವಿ ಪೂರ್ವ ಕಾಲೇಜುಗಳು ಆರಂಭ : ಶಾಸಕ ಆರ್‌. ನರೇಂದ್ರ

ಹನೂರು: ಮುಂದಿನ ವರ್ಷದಿಂದ ಹನೂರು ಕ್ಷೇತ್ರದಲ್ಲಿ 12 ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ಹನೂರಿನ ಜಿ.ವಿ ಗೌಡ ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕøತಿಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಳೆದ ದಶಕದ ಹಿಂದೆ ಹನೂರಿನಲ್ಲಿ ಪ್ರಥಮ ದರ್ಜೇ ಕಾಲೇಜನ್ನು ತೆರೆಯಲಾಗಿತ್ತು. ಆದರೆ ವಿದ್ಯಾರ್ಥಿ ನಿಲಯ ಇಲ್ಲದ ಪರಿಣಾಮ ಕಾಲೇಜಿಗೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು. ಈ ವೇಳೆ ಶಿಕ್ಷಣ ಇಲಾಖೆ ಮಾಹಿತಿ ಪಡೆದುಕೊಂಡಿದ್ದು, ಕಳೆದ ವರ್ಷ 100 ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಕಾಲೇಜುಗಳನ್ನು ವರ್ಗಾಯಿಸಲು ಸರ್ಕಾರ ಸೂಚಿಸಿತ್ತು. ಇದರಲ್ಲಿ ಹನೂರಿನ ಈ ಕಾಲೇಜು ಸೇರಿದ್ದು, ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ವರ್ಗಾಹಿಸಲಾಗಿತ್ತು. ಈ ವೇಳೆಗಾಗಲೇ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿತ್ತು. ಆಗಾಗಿ ಈ ಬಗ್ಗೆ ಹೆಚ್ಚಿನ ಅಗತ್ಯ ಅಗತ್ಯ ಕ್ರಮವಹಿಸಿ ಉನ್ನತ ಶಿಕ್ಷಣ ಸಚಿವರ ಗಮನಕ್ಕೆ ತರಲಾದ ಪರಿಣಾಮ ಕಾಲೇಜು ಹನೂರಿನಲ್ಲಿಯೇ ಉಳಿಸಿಕೊಳ್ಳಲು ಸಾಧ್ಯವಾಯಿತು ಎಂದರು.

ಸ್ಪರ್ಧಾತ್ಮಕ ಈ ಯುಗದಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆಯಬೇಕಾದರೆ ಓದಿನ ಕಡೆಗೆ ಹೆಚ್ಚಿನ ಒತ್ತನ್ನು ನೀಡಬೇಕಿದೆ. ಆದರೆ ಕೆಲ ವಿದ್ಯಾರ್ಥಿಗಳು ಮೊಬೈಲ್‍ಗೆ ಹೆಚ್ಚು ಮಾರು ಹೋಗಿದ್ದಾರೆ. ಮೊಬೈಲ್‍ನಿಂದ ಅನುಕೂಲವೂ ಇದೆ. ಅನಾನುಕೂಲವು ಇದೆ. ಆದ್ದರಿಂದ ಮೊಬೈಲ್ ಅನ್ನು ಶಿಕ್ಷಣಕ್ಕೆ ಹೆಚ್ಚು ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ವಿವಿಧ ಸ್ಪರ್ಧೇಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜೇತವನದ ಮನೋರಖ್ಖಿತ ಬಂತೇಜಿ, ಪಪಂ ಸದಸ್ಯ ಮಹೇಶ್, ಪ್ರಾಂಶುಪಾಲ ಶೈಲೇಶ್‍ಕುಮಾರ್, ಉಪನ್ಯಾಸಕರಾದ ರವಿಶಂಕರ್, ಶಾಂತರಾಜು, ವಾಣಿ, ಕೃಪಾ, ಮನೋಜ್‍ಕುಮಾರ್, ಗ್ರಂಥಾಲಯದ ಮುಖ್ಯಸ್ಥ ಸುರೇಂದ್ರ ಹಾಗೂ ವಿದ್ಯಾರ್ಥಿಗಳು ಇದ್ದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago