ಜಿಲ್ಲೆಗಳು

ಹನೂರು : ತಾ. ಮಟ್ಟದ ಕ್ರೀಡಾಕೂಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದ ದೈಹಿಕ ಶಿಕ್ಷಣ ಸಂಯೋಜಕ ಮಹದೇವ್

ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ 14 ವರ್ಷದೊಳಗಿನ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಜಯಗಳಿಸಿದ್ದಾರೆ.
ಬಾಲಕರ ವಾಲಿಬಾಲ್ ಪಂದ್ಯದಲ್ಲಿ ಸಂದನಪಾಳ್ಯ ಸಂತ ಅಂತೋಣಿ ಶಾಲೆ ಪ್ರಥಮ, ಹನೂರಿನ ವಿವೇಕಾನಂದ ಶಾಲೆ ದ್ವಿತೀಯ ಸ್ವಾನ ಪಡೆದುಕೊಂಡಿದೆ. ಕಬಡ್ಡಿಯಲ್ಲಿ ರಾಮಾಪುರದ ಇಂದಿರಾಗಾಂಧಿ ವಸತಿ ಶಾಲೆ ಪ್ರಥಮ, ಹೂಗ್ಯಂನ ಮೊರಾರ್ಜಿ ಶಾಲೆ ದ್ವಿತೀಯ ಸ್ಥಾನ, ಖೋ-ಖೋ ಪಂದ್ಯದಲ್ಲಿ ಕಣ್ಣೂರು ಸರ್ಕಾರಿ ಶಾಲೆ ಪ್ರಥಮ, ಕೆಂಪಯ್ಯನಹಟ್ಟಿ ಶಾಲೆ ದ್ವಿತೀಯ, ಥ್ರೋ ಬಾಲ್‍ನಲ್ಲಿ ಹನೂರಿನ ಕ್ರಿಸ್ತರಾಜ ಪ್ರಥಮ, ಹಳೇ ಮಾರ್ಟಳ್ಳಿ ಸರ್ಕರಿ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದರೆ 4*100 ಮೀಟರ್ ರಿಲೆಯಲ್ಲಿ ಹನೂರಿನ ಕ್ರಿಸ್ತರಾಜ ಶಾಲೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಹಳೆ ಮಾರ್ಟಳ್ಳಿ ಸರ್ಕಾರಿ ಶಾಲೆ ಪಡೆದುಕೊಂಡಿದೆ.

ಗುಂಡು ಎಸೆತದಲ್ಲಿ ಸಂದನಪಾಳ್ಯ ಸಂತ ಅತೋಣಿ ಶಾಲೆಯ ಹ್ಯಾರಿಸ್ ಸ್ಯಾಮುವೇಲ್ ಪ್ರಥಮ, ಹನೂರಿನ ಕ್ರಿಸ್ತರಾಜ ಶಾಲೆಯ ಗೌರವ್ ದ್ವಿತೀಯ ಹಾಗೂ ರಾಮಾಪುರ ಜೆಎಸ್‍ಎಸ್ ಶಾಲೆಯ ವಿಷ್ಣುಕುಮಾರ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ತಟ್ಟೆ ಎಸೆತದಲ್ಲಿ ಸಂತ ಅಂತೋಣಿ ಶಾಲೆಯ ಹ್ಯಾರಿಸ್ ಸ್ಯಾಮುವೆಲ್ (ಪ್ರ), ಇದೇ ಶಾಲೆಯ ಜೈಸನ್ (ದ್ವಿ), ವಡಕೆಹಳ್ಳ ಸರ್ಕಾರಿ ಶಾಲೆಯ ಶ್ರೀನಿವಾಸ್ (ತೃ), ಉದ್ದ ಜಿಗಿತದಲ್ಲಿ ಕ್ರಿಸ್ತರಾಜ ಶಾಲೆಯ ನಿರಂಜನ್ (ಪ್ರ), ಚನ್ನಾಲಿಂಗನಹಳ್ಳಿ ಶಾಲೆಯ ಮಧು (ದ್ವಿ), ಕೌದಳ್ಳಿ ಅಂತೋಣಿ ಶಾಲೆಯ ಸಂಜಯ್ (ತೃ), ಎತ್ತರ ಜಿಗಿತದಲ್ಲಿ ಬೈಲೂರು ಶಾಲೆಯ ನಾಗೇಶ್, ಮಾರ್ಟಳ್ಳಿ ಸಂತ ತೆರೆಸಾ ಶಾಲೆಯ ಜೆಸ್ಟಿನ್ ಲಿಯೋ ಹಾಗೂ ರಾಮಾಪುರ ಜೆಎಸ್‍ಎಸ್‍ನ ವಸಂತ್ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಗುಂಡು ಎಸೆತದಲ್ಲಿ ಪಿ.ಜಿ ಪಾಳ್ಯ ನಿರ್ಮಲ ಶಾಲೆಯ ಸಂಧ್ಯಾ (ಪ್ರ), ಇದೇ ಶಾಲೆಯ ಸಲೋನಿ ದಿಟಲಿತ (ದ್ವಿ), ತಟ್ಟೆ ಎಸೆತದಲ್ಲಿ ಮಾರ್ಟಳ್ಳಿ ಸಂತ ತೆರೆಸಾ ಶಾಲೆಯ ಶ್ರೇಯ ಜೋಸಿತ್ (ಪ್ರ), ರಾಮಾಪುರ ಜೆಎಸ್‍ಎಸ್ ಶಾಲೆಯ ಸಂಧ್ಯಾ (ದ್ವಿ), ಉದ್ದ ಜಿಗಿತದಲ್ಲಿ ಮ.ಬೆಟ್ಟ ಶ್ರೀ ಶಾಂತಮಲ್ಲಿಕಾರ್ಜುನ ಶಾಲೆಯ ಕೌಶಲ್ಯ (ಪ್ರ), ಪಿ.ಜಿ ಪಾಳ್ಯ ನಿರ್ಮಲ ಶಾಲೆಯ ನಾಗರತ್ನ (ದ್ವಿ), ಹಾಗೂ ಎತ್ತರ ಜಿಗಿತದಲ್ಲಿ ಮಾರ್ಟಳ್ಳಿ ಸಂತ ತೆರೆಸಾ ಶಾಲೆಯ ಪೆಲ್ಸಿ (ಪ್ರ), ರಾಮಾಪುರ ಜೆಎಸ್‍ಎಸ್ ಶಾಲೆಯ ಗಂಗೋತ್ರಿ ದ್ವಿತೀಯ ಸ್ಥಾನ ಪಡೆದಿದಾರೆ.

ವಾಲಿಬಾಲ್‍ನಲ್ಲಿ ಹೂಗ್ಯಂ ಸರ್ಕಾರಿ ಶಾಲೆ ಪ್ರಥಮ, ತೊಮಿಯಾರ್‍ಪಾಳ್ಯ ಸಂತ ಥಾಮಸ್ ದ್ವಿತೀಯ, ಕಬಡ್ಡಿಯಲ್ಲಿ ಮ.ಬೆಟ್ಟ ಶ್ರೀ ಶಾಂತಮಲ್ಲಿಕಾರ್ಜುನ ಶಾಲೆ ಪ್ರಥಮ, ಲೊಕ್ಕನಹಳಿ ಮಾನಸ ಶಾಲೆ ದ್ವಿತೀಯ ಹಾಗೂ ಖೋ-ಖೋದಲ್ಲಿ ಮ.ಬೆಟ್ಟ ಶಾಂತಮಲ್ಲಿಕಾರ್ಜುನ ಶಾಲೆ ಪ್ರಥಮ, ಹನೂರಿನ ವಿವೇಕಾನಂದ ಶಾಲೆ ದ್ವಿತೀಯ ಹಾಗೂ ಥ್ರೋ ಬಾಲ್‍ನಲ್ಲಿ ಹಳೆ ಮಾರ್ಟಳ್ಳಿ ಸರ್ಕಾರಿ ಶಾಲೆ ಪ್ರಥಮ, ಹನೂರಿನ ವಿವೇಕಾನಂದ ಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

andolanait

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

5 hours ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

7 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

8 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

9 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

9 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

10 hours ago