ಜಿಲ್ಲೆಗಳು

ಅತಿ ಶೀಘ್ರದಲ್ಲಿ ತಾಲ್ಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಕ್ರಮ : ಸಚಿವ ಆರ್. ಅಶೋಕ್

ಹನೂರು: ತಾಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಹುಲ್ಲೇಪುರದ ಬಳಿ ೮.೯೩ ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು,

ಬೆಂಗಳೂರಿನ ವಿಧಾನಸಭೆಯ ಅಧೀವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ಸಚಿವ ಆರ್.ಅಶೋಕ್ ಉತ್ತರಿಸಿ, ತಾಲೂಕಿನಲ್ಲಿ ಆಡಳಿತ ಸೌಧ ನಿರ್ಮಿಸಲು ಹುಲ್ಲೇಪುರ ಗ್ರಾಮದ ಸರ್ವೇ ನಂಬರ್ ೩೧೨/ಡಿ ರಲ್ಲಿ ೭.೭೬ ಎಕರೆ ಹಾಗೂ ೩೧೨/ಇ ರಲ್ಲಿ ೧.೧೭ ಎಕರೆ ಸೇರಿದಂತೆ ಒಟ್ಟು ೮.೯೩ ಎಕರೆ ಪ್ರದೇಶದಲ್ಲಿ ತಾಲೂಕು ಆಡಳಿತ ಸೌಧ  ನಿರ್ಮಿಸಲು ಕಾಯ್ದಿರಿಸಲಾಗಿದ್ದು, ಜಿಲ್ಲಾಧಿಕಾರಿ ಅವರ ಸೂಕ್ತ ಪ್ರಸ್ತಾವನೆಯನ್ನು ಪಡೆದು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಉತ್ತರ ನೀಡಿದ್ದರಲ್ಲದೇ ಈಗಾಗಲೇ ತಹಸೀಲ್ದಾರ್ ಕಚೇರಿ ಉಪ ನೋಂದಣಿ ಕಚೇರಿಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ, ಅಗ್ನಿಶಾಮಕ
ಠಾಣೆ ಹಾಗೂ ಸೆಸ್ಕ್ ಕಚೇರಿಯನ್ನು ಪ್ರಾರಂಭಿಸಲಾಗಿದ್ದು, ಇನ್ನುಳಿದ ಕಚೇರಿಗಳ ಸ್ಥಾಪನೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಗುಂಡಾಲ್ ಜಲಾಶಯದ ಕಾಲುವೆಗಳ ಅಭಿವೃದ್ಧಿಗೆ ಅನುದಾನ ನೀಡಿರುವ ಸಂಬಂಧ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉತ್ತರಿಸಿದ್ದು, ಕಳೆದ ೫ ವರ್ಷದ ಅವಧಿಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಗುಂಡಾಲ್ ಜಲಾಶಯಗಳ ಕಾಲುವೆಗಳಲ್ಲಿ ಗಿಡಗಂಟಿ ತೆರೆವುಗೊಳಿಸುವುದು, ಹೂಳೆತ್ತುವುದು ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗಾಗಿ ೯೦ ಲಕ್ಷ ರೂ ಅನುದಾನವನ್ನು ನೀಡಲಾಗಿದೆ. ಇದೀಗ ಕೆಲವು ಕಡೆಗಳಲ್ಲಿ ದುರಸ್ತಿ ಕಾರ್ಯ ಆಗಬೇಕಿರುವುದು ನಮ್ಮ ಗಮನಕ್ಕೆ ಬಂದಿದ್ದು, ಅಗತ್ಯ ಕ್ರಮವಹಿಸಲಾಗಿದೆ ಎಂದು
ತಿಳಿಸಿದ್ದಾರೆ.

ಮುಜರಾಯಿ ಸಚಿವ ಶಶಿಕಲಾ ಜೊಲ್ಲೆ ಅವರು ಉತ್ತರಿಸಿ, ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೮೬ ದೇವಸ್ಥಾನಗಳಿಗೆ ೧೦೨ ಲಕ್ಷ ರೂ ಅನುದಾನವನ್ನು ಬಿಡುಗಡೆ
ಮಾಡಲಾಗಿದ್ದು, ಅನುದಾನದ ಬಿಡುಗಡೆಯನ್ನು ಜಿಲ್ಲಾಧಿಕಾರಿ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

andolanait

Recent Posts

‘ಇದು ನನ್ನ ಜಮೀನು, ನಾನಿನ್ನೂ ಬದುಕಿದ್ದೇನೆ’

ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…

4 mins ago

‘ಒಳಚರಂಡಿ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ’: ಶಾಸಕ ಜಿಟಿಡಿ ಸೂಚನೆ

ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…

10 mins ago

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

9 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

9 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

9 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

9 hours ago