ಜಿಲ್ಲೆಗಳು

ಅತಿ ಶೀಘ್ರದಲ್ಲಿ ತಾಲ್ಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಕ್ರಮ : ಸಚಿವ ಆರ್. ಅಶೋಕ್

ಹನೂರು: ತಾಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಹುಲ್ಲೇಪುರದ ಬಳಿ ೮.೯೩ ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು,

ಬೆಂಗಳೂರಿನ ವಿಧಾನಸಭೆಯ ಅಧೀವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ಸಚಿವ ಆರ್.ಅಶೋಕ್ ಉತ್ತರಿಸಿ, ತಾಲೂಕಿನಲ್ಲಿ ಆಡಳಿತ ಸೌಧ ನಿರ್ಮಿಸಲು ಹುಲ್ಲೇಪುರ ಗ್ರಾಮದ ಸರ್ವೇ ನಂಬರ್ ೩೧೨/ಡಿ ರಲ್ಲಿ ೭.೭೬ ಎಕರೆ ಹಾಗೂ ೩೧೨/ಇ ರಲ್ಲಿ ೧.೧೭ ಎಕರೆ ಸೇರಿದಂತೆ ಒಟ್ಟು ೮.೯೩ ಎಕರೆ ಪ್ರದೇಶದಲ್ಲಿ ತಾಲೂಕು ಆಡಳಿತ ಸೌಧ  ನಿರ್ಮಿಸಲು ಕಾಯ್ದಿರಿಸಲಾಗಿದ್ದು, ಜಿಲ್ಲಾಧಿಕಾರಿ ಅವರ ಸೂಕ್ತ ಪ್ರಸ್ತಾವನೆಯನ್ನು ಪಡೆದು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಉತ್ತರ ನೀಡಿದ್ದರಲ್ಲದೇ ಈಗಾಗಲೇ ತಹಸೀಲ್ದಾರ್ ಕಚೇರಿ ಉಪ ನೋಂದಣಿ ಕಚೇರಿಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ, ಅಗ್ನಿಶಾಮಕ
ಠಾಣೆ ಹಾಗೂ ಸೆಸ್ಕ್ ಕಚೇರಿಯನ್ನು ಪ್ರಾರಂಭಿಸಲಾಗಿದ್ದು, ಇನ್ನುಳಿದ ಕಚೇರಿಗಳ ಸ್ಥಾಪನೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಗುಂಡಾಲ್ ಜಲಾಶಯದ ಕಾಲುವೆಗಳ ಅಭಿವೃದ್ಧಿಗೆ ಅನುದಾನ ನೀಡಿರುವ ಸಂಬಂಧ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉತ್ತರಿಸಿದ್ದು, ಕಳೆದ ೫ ವರ್ಷದ ಅವಧಿಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಗುಂಡಾಲ್ ಜಲಾಶಯಗಳ ಕಾಲುವೆಗಳಲ್ಲಿ ಗಿಡಗಂಟಿ ತೆರೆವುಗೊಳಿಸುವುದು, ಹೂಳೆತ್ತುವುದು ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗಾಗಿ ೯೦ ಲಕ್ಷ ರೂ ಅನುದಾನವನ್ನು ನೀಡಲಾಗಿದೆ. ಇದೀಗ ಕೆಲವು ಕಡೆಗಳಲ್ಲಿ ದುರಸ್ತಿ ಕಾರ್ಯ ಆಗಬೇಕಿರುವುದು ನಮ್ಮ ಗಮನಕ್ಕೆ ಬಂದಿದ್ದು, ಅಗತ್ಯ ಕ್ರಮವಹಿಸಲಾಗಿದೆ ಎಂದು
ತಿಳಿಸಿದ್ದಾರೆ.

ಮುಜರಾಯಿ ಸಚಿವ ಶಶಿಕಲಾ ಜೊಲ್ಲೆ ಅವರು ಉತ್ತರಿಸಿ, ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೮೬ ದೇವಸ್ಥಾನಗಳಿಗೆ ೧೦೨ ಲಕ್ಷ ರೂ ಅನುದಾನವನ್ನು ಬಿಡುಗಡೆ
ಮಾಡಲಾಗಿದ್ದು, ಅನುದಾನದ ಬಿಡುಗಡೆಯನ್ನು ಜಿಲ್ಲಾಧಿಕಾರಿ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

5 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

11 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

11 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago