ಹನೂರು : ನೆಲ ಜಲ ಭಾಷೆ ವಿಷಯವಾಗಿ ಒಗ್ಗಟ್ಟಾಗಿ ರಾಜ್ಯದ ಪ್ರತಿಯೊಬ್ಬ ನಾಗರಿಕರು ಹೋರಾಟ ನಡೆಸಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಹನೂರು ತಾಲೂಕು ಘಟಕದ ನೂತನ ಅಧ್ಯಕ್ಷ ನೇಮತ್ ಪಾಷಾ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ನಡೆದ ನೂತನ ಪದಾಧಿಕಾರಿಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡಿಗರು ಕೇವಲ ನವೆಂಬರ್ ತಿಂಗಳಿನಲ್ಲಿ ರಾಜ್ಯೋತ್ಸವ ಆಚರಣೆ ಮಾಡಿ ಸುಮ್ಮನಾಗಬಾರದು ವರ್ಷದ ಎಲ್ಲಾ ದಿನಗಳಲ್ಲಿ ಕನ್ನಡ ಭಾಷಾಭಿಮಾನವನ್ನು ಎತ್ತಿ ತೋರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹನೂರು ತಾಲೂಕು ಘಟಕದ ಕರ್ನಾಟಕ ರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿಯಾಗಿ ಬಂಡಳ್ಳಿ ರಾಹುಲ್ ಬೇಗ್, ಉಪಾಧ್ಯಕ್ಷರಾಗಿ ಶಿವಕುಮಾರ್, ಸದಸ್ಯರಾಗಿ ತಾಜ್ ಸದ್ದಾಂ ಮುಸವಿರ್ ಕಾರ್ತಿಕ್ ಸೋಹಲ್ ನದೀಮ್ ಫಾರೂಕ್ ರಾಹುಲ್ ಸುಲೇಮಾನ್ ನಾಸಿರ್ ಯೂಸುಫ್ ರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಶಮಿ ಶರೀಫ್, ಅಧ್ಯಕ್ಷ ಆರ್ ಮೋಹನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಪಾಷಾ ಜಿಲ್ಲಾ ಸಂಸ್ಕೃತಿಕ ಘಟಕದ ಅಧ್ಯಕ್ಷ ಶಿವಕುಮಾರ್ ಉಪಾಧ್ಯಕ್ಷ ನಾಗೇಶ್ ನಾಯಕ್ ಅವಿನಾಶ್ ಉಪಾಧ್ಯಕ್ಷ ಅಯಾಜ್, ಪತ್ರಿಕ ಕಾರ್ಯದರ್ಶಿ ಮತಿನ್ ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…