ಹನೂರು: ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿನ ಸೇತುವೆ ಮೇಲೆ ಮಳೆಯ ನೀರು ಯಥೇಚ್ಚವಾಗಿ ಹರಿಯುತ್ತಿರುವ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಗುರುವಾರ ಜರುಗಿದೆ.
ತಾಲ್ಲೂಕಿನಾದ್ಯಂತ ಕಳೆದ 4 ದಿನಗಳಿಂದ ಬಿಆರ್ ಟಿ ಹಾಗೂ ಒಡೆಯರಪಾಳ್ಯ ಸುತ್ತಮುತ್ತ ವ್ಯಾಪಕ ಮಳೆ ಬೀಳುತ್ತಿರುವ ಹಿನ್ನೆಲೆ ಲೊಕ್ಕನಹಳ್ಳಿ ಗ್ರಾಮ ದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಯಲ್ಲಿನ ಮಸ್ಕತಿ ಹಳ್ಳ ,ಉಡುತೊರೆ ಹಳ್ಳ , ಬಸವನಗುಡಿ ಸಮೀಪದ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಗುರುವಾರ ಮಧ್ಯಾಹ್ನದಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತಮ್ಮ ಗ್ರಾಮಗಳಿಗೆ ತೆರಳಲು ತೀವ್ರ ತೊಂದರೆಯಾಗಿದೆ.
ಈ ಸೇತುವೆಗಳಿಗೆ ತಡೆಗೋಡೆ ಇಲ್ಲದ ಪರಿಣಾಮ ಹಲವಾರು ವಾಹನಗಳು ಪಲ್ಟಿಯಾಗಿದೆ. ಕಳೆದ ತಿಂಗಳು ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದರು.ಇದಲ್ಲದೆ ಕಳೆದ ವಾರ ಡಿ ವಿಲೇಜ್ ಸಮೀಪ ಉಡುತೊರೆ ಹಳ್ಳ ಜಲಾಶಯಕ್ಕೆ ನಿರ್ಮಾಣ ಮಾಡಿರುವ ಸೇತುವೆ ದುರಸ್ತಿಗೊಂಡಿದ್ದ ಹಿನ್ನೆಲೆ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು ಆದರೂ ಸಹ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದುಪಿ ಜಿ ಪಾಳ್ಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಉಡುತೊರೆಹಳ್ಳ ಮೇಲ್ಸೇತುವೆ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿ 6ತಿಂಗಳು ಕಳೆದಿದೆ.ಇನ್ನೂ ಸಹ ಕಾಮಗಾರಿ ಪ್ರಾರಂಭವಾಗಿಲ್ಲ ಅಪಘಾತ ಅನಾಹುತಗಳು ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಮೇಲ್ಸೇತುವೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಎನ್ ಕೃಷ್ಣಮೂರ್ತಿ
ಪರಿವರ್ತನಾ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಚಿಕ್ಕರಂಗಶೆಟ್ಟಿ ದೊಡ್ಡಿ ತಿಳಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…