ಹನೂರು: ಶಿಕ್ಷಕರು ಸಹ ಅಪಾರವಾದ ಕೌಶಲ್ಯವನ್ನು ಹೊಂದಿದ್ದಾರೆ, ಅವರ ಪ್ರತಿಭೆಯನ್ನು ಹೊರಹಾಕುವಲ್ಲಿ ಈ ಒಂದು ಕ್ರೀಡಾಕೂಟವು ವೇದಿಕೆಯಾಗಿದೆ ಎಂದು ಮೈಸೂರು ವಿಭಾಗಿಯ ಉಪನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರ ಕಚೇರಿಯ ವೆಂಕಟೇಶಮೂರ್ತಿ ತಿಳಿಸಿದರು.
ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಬಳಿಕ ಅವರು ಮಾತನಾಡಿದರು.ಸಾಮಾನ್ಯ ಶಿಕ್ಷಕರಾಗಿ ಸರಳ, ಸಜ್ಜನಿಕೆಯಿಂದ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಪ್ರಯುಕ್ತ ಶಿಕ್ಷಕರ ದಿನಾಚರಣೆ ಆಚರಿಸುತ್ತಿರುವ ಸುಸಂದರ್ಭದಲ್ಲಿ ಕ್ರೀಡಾಕೂಟಗಳನ್ನು ಶಿಕ್ಷಕರಿಗಾಗಿ ಆಯೋಜಿಸಿರುವ ಕ್ರೀಡಾಕೂಟವು ಯಶಸ್ವಿಯಾಗಲಿ ಎಂದರು.
ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಮಾತನಾಡಿ ಸದಾ ವಿದ್ಯಾರ್ಥಿಗಳ ಒಳಿತಿಗಾಗಿ ಶ್ರಮಿಸುತ್ತಿರುವ ಶಿಕ್ಷಕರಿಗೂ ಕ್ರೀಡಾಕೂಟ ಆಯೋಜಿಸಿರುವುದು ಸಂತಸದ ವಿಚಾರ ಪ್ರತಿಯೊಬ್ಬ ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹ. ಮ. ಗುರುಸ್ವಾಮಿ, ತಾಲೂಕು ದೈಹಿಕ ಪರಿವೀಕ್ಷಕ ಮಹದೇವ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಮುನಿಯ ನಾಯಕ, ಶಿವರಾಜಮ್ಮ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಸೇರಿದಂತೆ ಇನ್ನಿತರೆ ಸಂಘಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರುಗಳು ಹಾಜರಿದ್ದರು.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…