ಹನೂರು: ಶಿಕ್ಷಕರು ಸಹ ಅಪಾರವಾದ ಕೌಶಲ್ಯವನ್ನು ಹೊಂದಿದ್ದಾರೆ, ಅವರ ಪ್ರತಿಭೆಯನ್ನು ಹೊರಹಾಕುವಲ್ಲಿ ಈ ಒಂದು ಕ್ರೀಡಾಕೂಟವು ವೇದಿಕೆಯಾಗಿದೆ ಎಂದು ಮೈಸೂರು ವಿಭಾಗಿಯ ಉಪನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರ ಕಚೇರಿಯ ವೆಂಕಟೇಶಮೂರ್ತಿ ತಿಳಿಸಿದರು.
ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಬಳಿಕ ಅವರು ಮಾತನಾಡಿದರು.ಸಾಮಾನ್ಯ ಶಿಕ್ಷಕರಾಗಿ ಸರಳ, ಸಜ್ಜನಿಕೆಯಿಂದ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಪ್ರಯುಕ್ತ ಶಿಕ್ಷಕರ ದಿನಾಚರಣೆ ಆಚರಿಸುತ್ತಿರುವ ಸುಸಂದರ್ಭದಲ್ಲಿ ಕ್ರೀಡಾಕೂಟಗಳನ್ನು ಶಿಕ್ಷಕರಿಗಾಗಿ ಆಯೋಜಿಸಿರುವ ಕ್ರೀಡಾಕೂಟವು ಯಶಸ್ವಿಯಾಗಲಿ ಎಂದರು.
ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಮಾತನಾಡಿ ಸದಾ ವಿದ್ಯಾರ್ಥಿಗಳ ಒಳಿತಿಗಾಗಿ ಶ್ರಮಿಸುತ್ತಿರುವ ಶಿಕ್ಷಕರಿಗೂ ಕ್ರೀಡಾಕೂಟ ಆಯೋಜಿಸಿರುವುದು ಸಂತಸದ ವಿಚಾರ ಪ್ರತಿಯೊಬ್ಬ ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹ. ಮ. ಗುರುಸ್ವಾಮಿ, ತಾಲೂಕು ದೈಹಿಕ ಪರಿವೀಕ್ಷಕ ಮಹದೇವ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಮುನಿಯ ನಾಯಕ, ಶಿವರಾಜಮ್ಮ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಸೇರಿದಂತೆ ಇನ್ನಿತರೆ ಸಂಘಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರುಗಳು ಹಾಜರಿದ್ದರು.
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…