ಜಿಲ್ಲೆಗಳು

ಹನೂರು : ಆದಿವಾಸಿ ಮಹಿಳೆಗೆ ರಾಜ್ಯೋತ್ಸವ ಪ್ರಶಸ್ತಿ

ಹನೂರು: ತಾಲ್ಲೂಕಿನ ಜೀರಿಗೆಗದ್ದೆ ಗ್ರಾಮದ ನಿವಾಸಿ ಮಾದಮ್ಮ ರವರು ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ತಾಲ್ಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಗದ್ದೆ ಗ್ರಾಮದ ಮಾದಮ್ಮ ಆದಿವಾಸಿ ಮಹಿಳೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಹಾಗೂ ಹನೂರು ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಮಾದಮ್ಮರವರು ಬುಡಕಟ್ಟು ಸೋಲಿಗ ಜನಾಂಗಕ್ಕೆ ಸೇರಿದವರಾಗಿದ್ದು ಇವರು 85 ವರ್ಷಗಳನ್ನು ಪೂರೈಸಿ ಆರೋಗ್ಯವಂತರಾಗಿದ್ದಾರೆ. ಈವರಿಗೆ 5 ಮಕ್ಕಳಿದ್ದು ಎಲ್ಲರಿಗೂ ವಿವಾಹ ಮಾಡಿಕೊಟ್ಟಿದ್ದಾರೆ. ಎಂಬತ್ತೈದು ವರ್ಷಗಳ ಇಳಿ ವಯಸ್ಸಿನಲ್ಲೂ ಸಹ ಸಂಘಟನೆ ಹೋರಾಟಗಳಲ್ಲಿ ಭಾಗವಹಿಸುತ್ತಾರೆ .ಸೋಲಿಗ ಅಭಿವೃದ್ಧಿ ಸಂಘದ ಸ್ಥಾಪನೆ ಪ್ರಾರಂಭದಲ್ಲಿ ಅತಿಹೆಚ್ಚಿನ ಮುತುವರ್ಜಿ ವಹಿಸಿ ಅನೇಕ ಭೂಮಿಯ ಹಕ್ಕು ಜೀತ ಪದ್ದತಿ ಸಂದರ್ಭದಲ್ಲಿ ಸೋಲಿಗರನ್ನು ಒಗ್ಗೂಡಿಸಿ ಅನೇಕ ಹೋರಾಟದಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮಹಿಳಾ ಮತ್ತು ಸಂಘಟನೆಗಳಲ್ಲಿ ಭಾಗವಹಿಸಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಂಡು ಸಂಘಟನೆಗಳಿಗೆ ಒತ್ತು ನೀಡಿದ್ದಾರೆ ಇವರು ಮೂಲತಃ ಪಾರಂಪಾರಿಕ ಅರಣ್ಯ ಗಿಡಮೂಲಿಕೆಗಳ ಔಷಧ ಉಪಚಾರ ಗಳಲ್ಲಿ ಅನೇಕ ವಿವಿಧ ಕಾಯಿಲೆಗಳಿಗೆ ಔಷಧಿ ಉಪಚಾರವನ್ನು ನೀಡುತ್ತಿರುವ ಅನುಭವವೂ ಸಹ ಇದೆ. ಇಲ್ಲಿಯವರೆಗೆ ಸಾವಿರಾರು ಗರ್ಭಿಣಿಯರಿಗೆ ಹೆರಿಗೆ ಮಾಡಿಸಿರುವ ಇವರಿಗೆ ಅಪಾರ ಜ್ಞಾನ ಮತ್ತು ಅನುಭವವಿದೆ ಇವರು ಮೂಲತಃ ಆದಿವಾಸಿ ಸೋಲಿಗರ ಕಲೆ ಸಂಸ್ಕೃತಿಗಳ ಬಗ್ಗೆ ಹೆಚ್ಚಿನ ಒಲವು ತೋರಿ ಇತ್ತೀಚಿನ ಪೀಳಿಗೆಗೆ ಜಾಗೃತಿ ಮೂಡಿಸುವಲ್ಲಿ ಪ್ರಮುಖರಿದ್ದಾರೆ. ಈ ಇಳಿ ವಯಸ್ಸಿನಲ್ಲೂ ಸಹ ಸೋಲಿಗರ ಜನಪದಗೀತೆ, ಗೊರುಕನ ಹಾಡು, ಸೋಬಾನ ಹಾಡು ಹಾಗೂ ಮಾದೇಶ್ವರ ಹಾಡುಗಳನ್ನು ಸ್ವಚ್ಚಂದವಾಗಿ ಹಾಡುವುದು ವಿಶೇಷ. ಇದಲ್ಲದೆ ಗಿಡಮೂಲಿಕೆ ಔಷಧ ಉಪಚಾರಗಳು ಮಂತ್ರಗಳನ್ನು ಈಗಲೂ ಜಪಿಸುವ ಕಲೆಯನ್ನು ಮನಗೊಂಡಿದ್ದಾರೆ.

ಇದೇ ಮೊಟ್ಟ ಮೊದಲ ಬಾರಿಗೆ ಹನೂರು ತಾಲ್ಲೂಕಿನ ಆದಿವಾಸಿ ಮಹಿಳೆ ಮಾದಮ್ಮ ರವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಸೋಲಿಗ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು, ಶುಭ ಹಾರೈಸಿದ್ದಾರೆ.

ಒಟ್ಟಾರೆ ಹನೂರು ತಾಲ್ಲೂಕಿನ ಜೀರಿಗೆಗದ್ದೆ ಗ್ರಾಮದ ಮಾದಮ್ಮ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ತಾಲ್ಲೂಕಿನಾದ್ಯಂತ ಜನಪ್ರತಿನಿಧಿಗಳು, ಅಧಿಕಾರಿಗಳು ಸಂಘ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

andolanait

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

8 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

12 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

12 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

12 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

12 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

12 hours ago