ಜಿಲ್ಲೆಗಳು

ಹನೂರು : ಆದಿವಾಸಿ ಮಹಿಳೆಗೆ ರಾಜ್ಯೋತ್ಸವ ಪ್ರಶಸ್ತಿ

ಹನೂರು: ತಾಲ್ಲೂಕಿನ ಜೀರಿಗೆಗದ್ದೆ ಗ್ರಾಮದ ನಿವಾಸಿ ಮಾದಮ್ಮ ರವರು ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ತಾಲ್ಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಗದ್ದೆ ಗ್ರಾಮದ ಮಾದಮ್ಮ ಆದಿವಾಸಿ ಮಹಿಳೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಹಾಗೂ ಹನೂರು ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಮಾದಮ್ಮರವರು ಬುಡಕಟ್ಟು ಸೋಲಿಗ ಜನಾಂಗಕ್ಕೆ ಸೇರಿದವರಾಗಿದ್ದು ಇವರು 85 ವರ್ಷಗಳನ್ನು ಪೂರೈಸಿ ಆರೋಗ್ಯವಂತರಾಗಿದ್ದಾರೆ. ಈವರಿಗೆ 5 ಮಕ್ಕಳಿದ್ದು ಎಲ್ಲರಿಗೂ ವಿವಾಹ ಮಾಡಿಕೊಟ್ಟಿದ್ದಾರೆ. ಎಂಬತ್ತೈದು ವರ್ಷಗಳ ಇಳಿ ವಯಸ್ಸಿನಲ್ಲೂ ಸಹ ಸಂಘಟನೆ ಹೋರಾಟಗಳಲ್ಲಿ ಭಾಗವಹಿಸುತ್ತಾರೆ .ಸೋಲಿಗ ಅಭಿವೃದ್ಧಿ ಸಂಘದ ಸ್ಥಾಪನೆ ಪ್ರಾರಂಭದಲ್ಲಿ ಅತಿಹೆಚ್ಚಿನ ಮುತುವರ್ಜಿ ವಹಿಸಿ ಅನೇಕ ಭೂಮಿಯ ಹಕ್ಕು ಜೀತ ಪದ್ದತಿ ಸಂದರ್ಭದಲ್ಲಿ ಸೋಲಿಗರನ್ನು ಒಗ್ಗೂಡಿಸಿ ಅನೇಕ ಹೋರಾಟದಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮಹಿಳಾ ಮತ್ತು ಸಂಘಟನೆಗಳಲ್ಲಿ ಭಾಗವಹಿಸಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಂಡು ಸಂಘಟನೆಗಳಿಗೆ ಒತ್ತು ನೀಡಿದ್ದಾರೆ ಇವರು ಮೂಲತಃ ಪಾರಂಪಾರಿಕ ಅರಣ್ಯ ಗಿಡಮೂಲಿಕೆಗಳ ಔಷಧ ಉಪಚಾರ ಗಳಲ್ಲಿ ಅನೇಕ ವಿವಿಧ ಕಾಯಿಲೆಗಳಿಗೆ ಔಷಧಿ ಉಪಚಾರವನ್ನು ನೀಡುತ್ತಿರುವ ಅನುಭವವೂ ಸಹ ಇದೆ. ಇಲ್ಲಿಯವರೆಗೆ ಸಾವಿರಾರು ಗರ್ಭಿಣಿಯರಿಗೆ ಹೆರಿಗೆ ಮಾಡಿಸಿರುವ ಇವರಿಗೆ ಅಪಾರ ಜ್ಞಾನ ಮತ್ತು ಅನುಭವವಿದೆ ಇವರು ಮೂಲತಃ ಆದಿವಾಸಿ ಸೋಲಿಗರ ಕಲೆ ಸಂಸ್ಕೃತಿಗಳ ಬಗ್ಗೆ ಹೆಚ್ಚಿನ ಒಲವು ತೋರಿ ಇತ್ತೀಚಿನ ಪೀಳಿಗೆಗೆ ಜಾಗೃತಿ ಮೂಡಿಸುವಲ್ಲಿ ಪ್ರಮುಖರಿದ್ದಾರೆ. ಈ ಇಳಿ ವಯಸ್ಸಿನಲ್ಲೂ ಸಹ ಸೋಲಿಗರ ಜನಪದಗೀತೆ, ಗೊರುಕನ ಹಾಡು, ಸೋಬಾನ ಹಾಡು ಹಾಗೂ ಮಾದೇಶ್ವರ ಹಾಡುಗಳನ್ನು ಸ್ವಚ್ಚಂದವಾಗಿ ಹಾಡುವುದು ವಿಶೇಷ. ಇದಲ್ಲದೆ ಗಿಡಮೂಲಿಕೆ ಔಷಧ ಉಪಚಾರಗಳು ಮಂತ್ರಗಳನ್ನು ಈಗಲೂ ಜಪಿಸುವ ಕಲೆಯನ್ನು ಮನಗೊಂಡಿದ್ದಾರೆ.

ಇದೇ ಮೊಟ್ಟ ಮೊದಲ ಬಾರಿಗೆ ಹನೂರು ತಾಲ್ಲೂಕಿನ ಆದಿವಾಸಿ ಮಹಿಳೆ ಮಾದಮ್ಮ ರವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಸೋಲಿಗ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು, ಶುಭ ಹಾರೈಸಿದ್ದಾರೆ.

ಒಟ್ಟಾರೆ ಹನೂರು ತಾಲ್ಲೂಕಿನ ಜೀರಿಗೆಗದ್ದೆ ಗ್ರಾಮದ ಮಾದಮ್ಮ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ತಾಲ್ಲೂಕಿನಾದ್ಯಂತ ಜನಪ್ರತಿನಿಧಿಗಳು, ಅಧಿಕಾರಿಗಳು ಸಂಘ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

4 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

6 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

15 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

15 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

15 hours ago