ಜಿಲ್ಲೆಗಳು

ಹನೂರು : ಪಶು ವೈದ್ಯಾಧಿಕಾರಿಗಳಿಂದ ಚರ್ಮಗಂಟು ರೋಗದ ಹಸುಗಳಿಗೆ ಲಸಿಕೆ

ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಹಸುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಸಹಾಯಕ ನಿರ್ದೇಶಕ ಸಿದ್ದರಾಜು ನೇತತ್ವದ ತಂಡ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ.

ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲ ಗ್ರಾಮದ ತಂಗವೇಲು ಎಂಬುವವರ ಹಸು ಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡು ಒಂದು ಹಸು ಮೃತಪಟ್ಟಿದ್ದು. ತದನಂತರ ಪೊನ್ನಾಚಿ ಗ್ರಾಮದ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಸ್ತುಗಳಿಗೆ ಗಂಟು ರೋಗ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಉಪನಿರ್ದೇಶಕ ಪಶುಪಾಲನಾ ಇಲಾಖೆ ಡಾ.ಶಿವಣ್ಣನವರ ಮಾರ್ಗದರ್ಶನದಲ್ಲಿ ಹನೂರು ತಾಲ್ಲೂಕಿನ ಸಹಾಯಕ ನಿರ್ದೇಶಕ ಸಿದ್ದರಾಜು ,ಪಶು ಪರೀಕ್ಷಕರು ಗಳಾದ ಬಸವಣ್ಣ,ಪಂಚಿಯಪ್ಪನ ಹಾಗೂ ಸಿಬ್ಬಂದಿ ವರ್ಗ ಪೊನ್ನಾಚಿ ಗ್ರಾಮಕ್ಕೆ ಭೇಟಿ ನೀಡಿ ಹಸುಗಳಿಗೆ ಚಿಕಿತ್ಸೆ ನೀಡಿದ್ದಾರೆ.

ಭಾನುವಾರ ಚರ್ಮ ಗಂಟುರೋಗ ಬಂದಿರುವ ಹಸುಗಳಿಗೆ ಎಲ್ಎಸ್ ಡಿ ಚುಚ್ಚುಮದ್ದು, ಹಾಗೂ ಇತರೆ ರಾಸುಗಳಿಗೆ ರೋಗ ನಿಯಂತ್ರಕ ಚುಚ್ಚುಮದ್ದುಗಳನ್ನು ನೀಡಲಾಗಿದೆ .

ನವೆಂಬರ್ 7 ರಿಂದ ಜಿಲ್ಲೆಯಾದ್ಯಂತ ರಾಸುಗಳಿಗೆ ಕಾಲು ಬಾಯಿ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವೈದ್ಯಾಧಿಕಾರಿಗಳು ಗ್ರಾಮಕ್ಕೆ ಬಂದಾಗ ಹಸುಗಳಿಗೆ ಲಸಿಕೆ ಹಾಕಿಸಿ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಡಾ ಶಿವಣ್ಣ ಮನವಿ ಮಾಡಿದ್ದಾರೆ

ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಹಸುಗಳಿಗೆ ಕಾಣಿಸಿಕೊಂಡಿರುವ ಚರ್ಮ ಗಂಟು ರೋಗಕ್ಕೆ ರೈತರು ಭಯ ಬೀಳುವ ಅಗತ್ಯವಿಲ್ಲ, ಚಿಕಿತ್ಸೆ ನೀಡಿದ 4 ದಿನಗಳೊಳಗೆ ಹಸುಗಳು ಚೇತರಿಸಿಕೊಳ್ಳಲಿದೆ.ಹನೂರು ತಾಲ್ಲೂಕಿನ ನಾಗನತ್ತ,ಅರಬಗೆರೆ ಮಲೆಮಾದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಗಂಟು ರೋಗ ಕಾಣಿಸಿಕೊಂಡಿದ್ದು ಚಿಕಿತ್ಸೆ ನೀಡಿದ ನಂತರ ಸಮಸ್ಯೆ ಬಗೆಹರಿದಿದೆ. ಕಕ್ಕೆ ಹೊಲದ ತಂಗವೇಲು ಎಂಬುವರಿಗೆ ಸೇರಿದ ಹಸು ರೋಗಕ್ಕೆ ತುತ್ತಾಗಿ ಮೃತಪಟ್ಟಿರುವುದರಿಂದ ಇವರಿಗೆ ಸರ್ಕಾರದಿಂದ 20 ಸಾವಿರ ಪರಿಹಾರ ಧನ ಸಿಗಲಿದೆ ಎಂದು ಡಾ.ಶಿವಣ್ಣ ಪತ್ರಿಕೆಗೆ ತಿಳಿಸಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago