ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಹಸುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಸಹಾಯಕ ನಿರ್ದೇಶಕ ಸಿದ್ದರಾಜು ನೇತತ್ವದ ತಂಡ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ.
ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲ ಗ್ರಾಮದ ತಂಗವೇಲು ಎಂಬುವವರ ಹಸು ಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡು ಒಂದು ಹಸು ಮೃತಪಟ್ಟಿದ್ದು. ತದನಂತರ ಪೊನ್ನಾಚಿ ಗ್ರಾಮದ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಸ್ತುಗಳಿಗೆ ಗಂಟು ರೋಗ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಉಪನಿರ್ದೇಶಕ ಪಶುಪಾಲನಾ ಇಲಾಖೆ ಡಾ.ಶಿವಣ್ಣನವರ ಮಾರ್ಗದರ್ಶನದಲ್ಲಿ ಹನೂರು ತಾಲ್ಲೂಕಿನ ಸಹಾಯಕ ನಿರ್ದೇಶಕ ಸಿದ್ದರಾಜು ,ಪಶು ಪರೀಕ್ಷಕರು ಗಳಾದ ಬಸವಣ್ಣ,ಪಂಚಿಯಪ್ಪನ ಹಾಗೂ ಸಿಬ್ಬಂದಿ ವರ್ಗ ಪೊನ್ನಾಚಿ ಗ್ರಾಮಕ್ಕೆ ಭೇಟಿ ನೀಡಿ ಹಸುಗಳಿಗೆ ಚಿಕಿತ್ಸೆ ನೀಡಿದ್ದಾರೆ.
ಭಾನುವಾರ ಚರ್ಮ ಗಂಟುರೋಗ ಬಂದಿರುವ ಹಸುಗಳಿಗೆ ಎಲ್ಎಸ್ ಡಿ ಚುಚ್ಚುಮದ್ದು, ಹಾಗೂ ಇತರೆ ರಾಸುಗಳಿಗೆ ರೋಗ ನಿಯಂತ್ರಕ ಚುಚ್ಚುಮದ್ದುಗಳನ್ನು ನೀಡಲಾಗಿದೆ .
ನವೆಂಬರ್ 7 ರಿಂದ ಜಿಲ್ಲೆಯಾದ್ಯಂತ ರಾಸುಗಳಿಗೆ ಕಾಲು ಬಾಯಿ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವೈದ್ಯಾಧಿಕಾರಿಗಳು ಗ್ರಾಮಕ್ಕೆ ಬಂದಾಗ ಹಸುಗಳಿಗೆ ಲಸಿಕೆ ಹಾಕಿಸಿ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಡಾ ಶಿವಣ್ಣ ಮನವಿ ಮಾಡಿದ್ದಾರೆ
ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಹಸುಗಳಿಗೆ ಕಾಣಿಸಿಕೊಂಡಿರುವ ಚರ್ಮ ಗಂಟು ರೋಗಕ್ಕೆ ರೈತರು ಭಯ ಬೀಳುವ ಅಗತ್ಯವಿಲ್ಲ, ಚಿಕಿತ್ಸೆ ನೀಡಿದ 4 ದಿನಗಳೊಳಗೆ ಹಸುಗಳು ಚೇತರಿಸಿಕೊಳ್ಳಲಿದೆ.ಹನೂರು ತಾಲ್ಲೂಕಿನ ನಾಗನತ್ತ,ಅರಬಗೆರೆ ಮಲೆಮಾದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಗಂಟು ರೋಗ ಕಾಣಿಸಿಕೊಂಡಿದ್ದು ಚಿಕಿತ್ಸೆ ನೀಡಿದ ನಂತರ ಸಮಸ್ಯೆ ಬಗೆಹರಿದಿದೆ. ಕಕ್ಕೆ ಹೊಲದ ತಂಗವೇಲು ಎಂಬುವರಿಗೆ ಸೇರಿದ ಹಸು ರೋಗಕ್ಕೆ ತುತ್ತಾಗಿ ಮೃತಪಟ್ಟಿರುವುದರಿಂದ ಇವರಿಗೆ ಸರ್ಕಾರದಿಂದ 20 ಸಾವಿರ ಪರಿಹಾರ ಧನ ಸಿಗಲಿದೆ ಎಂದು ಡಾ.ಶಿವಣ್ಣ ಪತ್ರಿಕೆಗೆ ತಿಳಿಸಿದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…