ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಹಸುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಸಹಾಯಕ ನಿರ್ದೇಶಕ ಸಿದ್ದರಾಜು ನೇತತ್ವದ ತಂಡ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ.
ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲ ಗ್ರಾಮದ ತಂಗವೇಲು ಎಂಬುವವರ ಹಸು ಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡು ಒಂದು ಹಸು ಮೃತಪಟ್ಟಿದ್ದು. ತದನಂತರ ಪೊನ್ನಾಚಿ ಗ್ರಾಮದ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಸ್ತುಗಳಿಗೆ ಗಂಟು ರೋಗ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಉಪನಿರ್ದೇಶಕ ಪಶುಪಾಲನಾ ಇಲಾಖೆ ಡಾ.ಶಿವಣ್ಣನವರ ಮಾರ್ಗದರ್ಶನದಲ್ಲಿ ಹನೂರು ತಾಲ್ಲೂಕಿನ ಸಹಾಯಕ ನಿರ್ದೇಶಕ ಸಿದ್ದರಾಜು ,ಪಶು ಪರೀಕ್ಷಕರು ಗಳಾದ ಬಸವಣ್ಣ,ಪಂಚಿಯಪ್ಪನ ಹಾಗೂ ಸಿಬ್ಬಂದಿ ವರ್ಗ ಪೊನ್ನಾಚಿ ಗ್ರಾಮಕ್ಕೆ ಭೇಟಿ ನೀಡಿ ಹಸುಗಳಿಗೆ ಚಿಕಿತ್ಸೆ ನೀಡಿದ್ದಾರೆ.
ಭಾನುವಾರ ಚರ್ಮ ಗಂಟುರೋಗ ಬಂದಿರುವ ಹಸುಗಳಿಗೆ ಎಲ್ಎಸ್ ಡಿ ಚುಚ್ಚುಮದ್ದು, ಹಾಗೂ ಇತರೆ ರಾಸುಗಳಿಗೆ ರೋಗ ನಿಯಂತ್ರಕ ಚುಚ್ಚುಮದ್ದುಗಳನ್ನು ನೀಡಲಾಗಿದೆ .
ನವೆಂಬರ್ 7 ರಿಂದ ಜಿಲ್ಲೆಯಾದ್ಯಂತ ರಾಸುಗಳಿಗೆ ಕಾಲು ಬಾಯಿ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವೈದ್ಯಾಧಿಕಾರಿಗಳು ಗ್ರಾಮಕ್ಕೆ ಬಂದಾಗ ಹಸುಗಳಿಗೆ ಲಸಿಕೆ ಹಾಕಿಸಿ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಡಾ ಶಿವಣ್ಣ ಮನವಿ ಮಾಡಿದ್ದಾರೆ
ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಹಸುಗಳಿಗೆ ಕಾಣಿಸಿಕೊಂಡಿರುವ ಚರ್ಮ ಗಂಟು ರೋಗಕ್ಕೆ ರೈತರು ಭಯ ಬೀಳುವ ಅಗತ್ಯವಿಲ್ಲ, ಚಿಕಿತ್ಸೆ ನೀಡಿದ 4 ದಿನಗಳೊಳಗೆ ಹಸುಗಳು ಚೇತರಿಸಿಕೊಳ್ಳಲಿದೆ.ಹನೂರು ತಾಲ್ಲೂಕಿನ ನಾಗನತ್ತ,ಅರಬಗೆರೆ ಮಲೆಮಾದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಗಂಟು ರೋಗ ಕಾಣಿಸಿಕೊಂಡಿದ್ದು ಚಿಕಿತ್ಸೆ ನೀಡಿದ ನಂತರ ಸಮಸ್ಯೆ ಬಗೆಹರಿದಿದೆ. ಕಕ್ಕೆ ಹೊಲದ ತಂಗವೇಲು ಎಂಬುವರಿಗೆ ಸೇರಿದ ಹಸು ರೋಗಕ್ಕೆ ತುತ್ತಾಗಿ ಮೃತಪಟ್ಟಿರುವುದರಿಂದ ಇವರಿಗೆ ಸರ್ಕಾರದಿಂದ 20 ಸಾವಿರ ಪರಿಹಾರ ಧನ ಸಿಗಲಿದೆ ಎಂದು ಡಾ.ಶಿವಣ್ಣ ಪತ್ರಿಕೆಗೆ ತಿಳಿಸಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…