ಜಿಲ್ಲೆಗಳು

ಹನೂರು : ಪಶು ವೈದ್ಯಾಧಿಕಾರಿಗಳಿಂದ ಚರ್ಮಗಂಟು ರೋಗದ ಹಸುಗಳಿಗೆ ಲಸಿಕೆ

ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಹಸುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಸಹಾಯಕ ನಿರ್ದೇಶಕ ಸಿದ್ದರಾಜು ನೇತತ್ವದ ತಂಡ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ.

ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲ ಗ್ರಾಮದ ತಂಗವೇಲು ಎಂಬುವವರ ಹಸು ಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡು ಒಂದು ಹಸು ಮೃತಪಟ್ಟಿದ್ದು. ತದನಂತರ ಪೊನ್ನಾಚಿ ಗ್ರಾಮದ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಸ್ತುಗಳಿಗೆ ಗಂಟು ರೋಗ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಉಪನಿರ್ದೇಶಕ ಪಶುಪಾಲನಾ ಇಲಾಖೆ ಡಾ.ಶಿವಣ್ಣನವರ ಮಾರ್ಗದರ್ಶನದಲ್ಲಿ ಹನೂರು ತಾಲ್ಲೂಕಿನ ಸಹಾಯಕ ನಿರ್ದೇಶಕ ಸಿದ್ದರಾಜು ,ಪಶು ಪರೀಕ್ಷಕರು ಗಳಾದ ಬಸವಣ್ಣ,ಪಂಚಿಯಪ್ಪನ ಹಾಗೂ ಸಿಬ್ಬಂದಿ ವರ್ಗ ಪೊನ್ನಾಚಿ ಗ್ರಾಮಕ್ಕೆ ಭೇಟಿ ನೀಡಿ ಹಸುಗಳಿಗೆ ಚಿಕಿತ್ಸೆ ನೀಡಿದ್ದಾರೆ.

ಭಾನುವಾರ ಚರ್ಮ ಗಂಟುರೋಗ ಬಂದಿರುವ ಹಸುಗಳಿಗೆ ಎಲ್ಎಸ್ ಡಿ ಚುಚ್ಚುಮದ್ದು, ಹಾಗೂ ಇತರೆ ರಾಸುಗಳಿಗೆ ರೋಗ ನಿಯಂತ್ರಕ ಚುಚ್ಚುಮದ್ದುಗಳನ್ನು ನೀಡಲಾಗಿದೆ .

ನವೆಂಬರ್ 7 ರಿಂದ ಜಿಲ್ಲೆಯಾದ್ಯಂತ ರಾಸುಗಳಿಗೆ ಕಾಲು ಬಾಯಿ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವೈದ್ಯಾಧಿಕಾರಿಗಳು ಗ್ರಾಮಕ್ಕೆ ಬಂದಾಗ ಹಸುಗಳಿಗೆ ಲಸಿಕೆ ಹಾಕಿಸಿ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಡಾ ಶಿವಣ್ಣ ಮನವಿ ಮಾಡಿದ್ದಾರೆ

ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಹಸುಗಳಿಗೆ ಕಾಣಿಸಿಕೊಂಡಿರುವ ಚರ್ಮ ಗಂಟು ರೋಗಕ್ಕೆ ರೈತರು ಭಯ ಬೀಳುವ ಅಗತ್ಯವಿಲ್ಲ, ಚಿಕಿತ್ಸೆ ನೀಡಿದ 4 ದಿನಗಳೊಳಗೆ ಹಸುಗಳು ಚೇತರಿಸಿಕೊಳ್ಳಲಿದೆ.ಹನೂರು ತಾಲ್ಲೂಕಿನ ನಾಗನತ್ತ,ಅರಬಗೆರೆ ಮಲೆಮಾದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಗಂಟು ರೋಗ ಕಾಣಿಸಿಕೊಂಡಿದ್ದು ಚಿಕಿತ್ಸೆ ನೀಡಿದ ನಂತರ ಸಮಸ್ಯೆ ಬಗೆಹರಿದಿದೆ. ಕಕ್ಕೆ ಹೊಲದ ತಂಗವೇಲು ಎಂಬುವರಿಗೆ ಸೇರಿದ ಹಸು ರೋಗಕ್ಕೆ ತುತ್ತಾಗಿ ಮೃತಪಟ್ಟಿರುವುದರಿಂದ ಇವರಿಗೆ ಸರ್ಕಾರದಿಂದ 20 ಸಾವಿರ ಪರಿಹಾರ ಧನ ಸಿಗಲಿದೆ ಎಂದು ಡಾ.ಶಿವಣ್ಣ ಪತ್ರಿಕೆಗೆ ತಿಳಿಸಿದರು.

andolanait

Recent Posts

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

35 mins ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

2 hours ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

4 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

4 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

5 hours ago