ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಹಸುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಸಹಾಯಕ ನಿರ್ದೇಶಕ ಸಿದ್ದರಾಜು ನೇತತ್ವದ ತಂಡ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ.
ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲ ಗ್ರಾಮದ ತಂಗವೇಲು ಎಂಬುವವರ ಹಸು ಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡು ಒಂದು ಹಸು ಮೃತಪಟ್ಟಿದ್ದು. ತದನಂತರ ಪೊನ್ನಾಚಿ ಗ್ರಾಮದ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಸ್ತುಗಳಿಗೆ ಗಂಟು ರೋಗ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಉಪನಿರ್ದೇಶಕ ಪಶುಪಾಲನಾ ಇಲಾಖೆ ಡಾ.ಶಿವಣ್ಣನವರ ಮಾರ್ಗದರ್ಶನದಲ್ಲಿ ಹನೂರು ತಾಲ್ಲೂಕಿನ ಸಹಾಯಕ ನಿರ್ದೇಶಕ ಸಿದ್ದರಾಜು ,ಪಶು ಪರೀಕ್ಷಕರು ಗಳಾದ ಬಸವಣ್ಣ,ಪಂಚಿಯಪ್ಪನ ಹಾಗೂ ಸಿಬ್ಬಂದಿ ವರ್ಗ ಪೊನ್ನಾಚಿ ಗ್ರಾಮಕ್ಕೆ ಭೇಟಿ ನೀಡಿ ಹಸುಗಳಿಗೆ ಚಿಕಿತ್ಸೆ ನೀಡಿದ್ದಾರೆ.
ಭಾನುವಾರ ಚರ್ಮ ಗಂಟುರೋಗ ಬಂದಿರುವ ಹಸುಗಳಿಗೆ ಎಲ್ಎಸ್ ಡಿ ಚುಚ್ಚುಮದ್ದು, ಹಾಗೂ ಇತರೆ ರಾಸುಗಳಿಗೆ ರೋಗ ನಿಯಂತ್ರಕ ಚುಚ್ಚುಮದ್ದುಗಳನ್ನು ನೀಡಲಾಗಿದೆ .
ನವೆಂಬರ್ 7 ರಿಂದ ಜಿಲ್ಲೆಯಾದ್ಯಂತ ರಾಸುಗಳಿಗೆ ಕಾಲು ಬಾಯಿ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವೈದ್ಯಾಧಿಕಾರಿಗಳು ಗ್ರಾಮಕ್ಕೆ ಬಂದಾಗ ಹಸುಗಳಿಗೆ ಲಸಿಕೆ ಹಾಕಿಸಿ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಡಾ ಶಿವಣ್ಣ ಮನವಿ ಮಾಡಿದ್ದಾರೆ
ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಹಸುಗಳಿಗೆ ಕಾಣಿಸಿಕೊಂಡಿರುವ ಚರ್ಮ ಗಂಟು ರೋಗಕ್ಕೆ ರೈತರು ಭಯ ಬೀಳುವ ಅಗತ್ಯವಿಲ್ಲ, ಚಿಕಿತ್ಸೆ ನೀಡಿದ 4 ದಿನಗಳೊಳಗೆ ಹಸುಗಳು ಚೇತರಿಸಿಕೊಳ್ಳಲಿದೆ.ಹನೂರು ತಾಲ್ಲೂಕಿನ ನಾಗನತ್ತ,ಅರಬಗೆರೆ ಮಲೆಮಾದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಗಂಟು ರೋಗ ಕಾಣಿಸಿಕೊಂಡಿದ್ದು ಚಿಕಿತ್ಸೆ ನೀಡಿದ ನಂತರ ಸಮಸ್ಯೆ ಬಗೆಹರಿದಿದೆ. ಕಕ್ಕೆ ಹೊಲದ ತಂಗವೇಲು ಎಂಬುವರಿಗೆ ಸೇರಿದ ಹಸು ರೋಗಕ್ಕೆ ತುತ್ತಾಗಿ ಮೃತಪಟ್ಟಿರುವುದರಿಂದ ಇವರಿಗೆ ಸರ್ಕಾರದಿಂದ 20 ಸಾವಿರ ಪರಿಹಾರ ಧನ ಸಿಗಲಿದೆ ಎಂದು ಡಾ.ಶಿವಣ್ಣ ಪತ್ರಿಕೆಗೆ ತಿಳಿಸಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…