ಮಡಿಕೇರಿ: ಹಶೀಶ್ ಆಯಿಲ್ ಮಾರಾಟ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುವ ಕೊಡಗು ಜಿಲ್ಲಾ ಪೊಲೀಸರು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳ ಮೂಲದ ಅಹಮ್ಮದ್ ಕಬೀರ್ (೩೭), ಅಬ್ದುಲ್ ಖಾದರ್ (೨೭), ಮಹಮ್ಮದ್ ಮುಜಾಬಿಲ್ (೨೨) ಬಂಧಿತ ಆರೋಪಿಗಳು.
ನಗರದ ತಮ್ಮ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ ಅಯ್ಯಪ್ಪ, ಬಂಧಿತರಿಂದ ೧೦ ಲಕ್ಷ ರೂ ಮೌಲ್ಯದ ೧.೧೬೦ ಗ್ರಾಂ ಹಶೀಶ್ ಆಯಿಲ್ ವಶಪಡಿಸಿಕೊಳ್ಳಲಾಗಿದ್ದು, ಭಾಗಮಂಡಲ ಠಾಣಾ ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಾರಿನ ತಪಾಸಣೆ ವೇಳೆ ಎರಡು ಅನುಮಾನಸ್ಪದ ನಂಬರ್ ಪ್ಲೇಟ್ಗಳು ಪತ್ತೆ ಆಗಿದೆ. ಪರಿಶೀಲನೆ ನಡೆಸಿದಾಗ ಕಾರಿನ ಡಿಕ್ಕಿಯಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿ ಹಶೀಶ್ ಆಯಿಲ್ ಪತ್ತೆಯಾಗಿದೆ. ವಿಚಾರಣೆ ಸಂದರ್ಭ ಹಶೀಶ್ ಆಯಿಲ್ನ್ನು ಮಾರಾಟ ಮಾಡಲು ತಂದಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಬಂಧಿತರೆಲ್ಲರೂ ಕೇರಳ ಮೂಲದ ಆರೋಪಿಗಳಾಗಿದ್ದು, ಆಂಧ್ರಪ್ರದೇಶದ ಗುಂಟೂರಿನಿಂದ ಮಾದಕ ದ್ರವ್ಯ ತಂದಿರುವುದಾಗಿ ಹೇಳಿಕೆ ನೀಡಿದ್ದಾರೆ. ಬಂಧಿತ ಆರೋಪಿಗಳಿಂದ ವಿವಿಧ ನಂಬರ್ ಪ್ಲೇಟ್, ಮಾರುತಿ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಹಮದ್ ವಾಹನ ಕಳ್ಳತನ, ರಾಬರಿ, ಹನಿಟ್ರ್ಯಾಪ್ನಲ್ಲಿ ಸಕ್ರಿಯನಾಗಿದ್ದ, ಈತನ ವಿರುದ್ಧ ಮಡಿಕೇರಿ ಪೋಲಿಸ್ ಸ್ಟೇಷನ್ನಲ್ಲಿ ಕೂಡ ವಿವಿಧ ಪ್ರಕರಣಗಳು ದಾಖಲಾಗಿದೆ ಎಂದು ತಿಳಿಸಿದರು.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…