ಜಿಲ್ಲೆಗಳು

ಹಾಸನ: ಗ್ರೈಂಡರ್ ಮಿಕ್ಸಿ ಸ್ಫೋಟ ಆರೋಪಿ ಬಂಧನ

 ವಿಚ್ಛೇದಿತ ಮಹಿಳೆಗೆ ಪಾಠ ಕಲಿಸಲು ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ ಭಗ್ನಪ್ರೇಮಿ

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ನಲ್ಲಿ ನಡೆದಿದ್ದ ಮಿಕ್ಸರ್ ಸ್ಫೋಟ ಪ್ರಕರಣದ ರಹಸ್ಯ ಬಯಲಾಗಿದ್ದು ಇದು  ಮದುವೆ ನಿರಾಕರಿಸಿದ್ದಕ್ಕೆ ವಿಚ್ಛೇದಿತ ಮಹಿಳೆಯ ಹತ್ಯೆಗೆ ಸಂಚು ರೂಪಿಸಿದ ಪ್ರಕರಣ ಎಂಬುದು ಬೆಳಕಿಗೆ ಬಂದಿದೆ.
ಬೆಂಗಳೂರಿನ ಅನೂಪ್ ಕುಮಾರ್ ಎಂಬಾತ ಮಹಿಳೆಯ ಹತ್ಯೆಗೆ ಸಂಚು ರೂಪಿಸಿ ಮಿಕ್ಸರ್ನಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ್ದ ಎಂಬುದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮಂಗಳೂರಿನ ಕುಕ್ಕರ್ ಸ್ಫೋಟದ ಕಹಿ ನೆನೆಪು ಮಾಸುವ ಬೆನ್ನಲ್ಲೇ ಹಾಸನದಲ್ಲಿ ಡಿಸೆಂಬರ್ 26ರಂದು ಸಂಜೆ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ಸ್ಫೋಟಗೊಂಡಿತ್ತು. ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಇದೊಂದು ಪ್ರೇಮ ವೈಫಲ್ಯ ಪ್ರಕರಣವೆಂಬುದು ಗೊತ್ತಾಗಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ಹಾಸನದ ಮಹಿಳೆಯೊಬ್ಬರು ವಿವಾಹ ವಿಚ್ಛೇದನದ ನಂತರ ಮ್ಯಾಟ್ರಿಮೋನಿಯಲ್ಲಿ ತನ್ನ ಫೋಟೋ ಅಪ್ಲೋಡ್ ಮಾಡಿದ್ದರು. ಮಹಿಳೆಯ ಅಂದಕ್ಕೆ ಮಾರುಹೋಗಿ ಬೆಂಗಳೂರು ಮೂಲದ ಅನೂಪ್ ಮದುವೆ ಪ್ರಸ್ತಾಪ ಮಾಡಿದ್ದರು. ಇದನ್ನು ಒಪ್ಪಿಕೊಂಡಿದ್ದ ಮಹಿಳೆ ಅನೂಪ್ ಜತೆ ಸುತ್ತಾಡಿದ್ದರು. ಅನೂಪ್ಕುಮಾರ್ ವಿಶ್ವಾಸ ಗಳಿಸಿ ಆತನಿಂದ ಲಕ್ಷಾಂತರ ರೂ. ಹಣ ಸಾಲ ಪಡೆದಿದ್ದರು ಎನ್ನಲಾಗಿದೆ.
ಮಹಿಳೆ ವಿರುದ್ಧ ಆಕ್ರೋಶಗೊಂಡು ಕೃತ್ಯ
ಕೊಟ್ಟ ಹಣ ವಾಪಸ್ ನೀಡದೆ, ಮದುವೆಗೂ ಒಪ್ಪದೆ ಮಹಿಳೆ ಅನೂಪ್ನಿಂದ ಅಂತರ ಕಾಯ್ದುಕೊಂಡಿದ್ದರು. ಇದರಿಂದ ತೀವ್ರ ನಿರಾಸೆಗೆ ಒಳಗಾದ ಆರೋಪಿ, ಒಂದೋ ಮದುವೆಯಾಗಬೇಕು ಇಲ್ಲವೇ ಹಣ ವಾಪಸ್ ನೀಡಬೇಕು ಎಂದು ಮಹಿಳೆಗೆ ತಿಳಿಸಿದ್ದ. ಈ ಮಧ್ಯೆ, ಒಂದೆರಡು ಬಾರಿ ಹಾಸನಕ್ಕೆ ಬಂದು ಮಹಿಳೆ ಮನೆ ಎದುರು ಗಲಾಟೆ ಮಾಡಿದ್ದ. ಇದರ ಬೆನ್ನಲ್ಲೇ, ಅನೂಪ್ ವಿರುದ್ಧ ಪೊಲೀಸರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ಮಹಿಳೆ ದೂರು ನೀಡಿದ್ದರು.
ಮಿಕ್ಸರ್ನಲ್ಲಿ ಡಿಟೋನೇಟರ್ ಇಟ್ಟು ಕೊರಿಯರ್
ತನಗೆ ಮೋಸವಾಗಿದೆ ಎಂದು ಮಹಿಳೆ ವಿರುದ್ಧ ಕೆರಳಿದ ಅನೂಪ್ ಮೊದಲು ಸೀರೆ, ನಂತರ ಸೀರಿಯಲ್ ಸೆಟ್ ಪಾರ್ಸೆಲ್ ಕಳುಹಿಸಿದ್ದ. ಇದನ್ನು ನಿರಾಕರಿಸಿದ್ದ ಮಹಿಳೆ ಸೀರೆಯನ್ನು ವಾಪಾಸ್ ಕಳುಹಿಸಿ ನಿಂದಿಸಿದ್ದರು. ಹೀಗಾಗಿ ಮೂರನೇ ಬಾರಿ ಮಿಕ್ಸಿಯಲ್ಲಿ ಡಿಟೋನೇಟರ್ ಇಟ್ಟು ಕಳುಹಿಸಿದ್ದಾನೆ. ಮೋಸ ಮಾಡಿದವಳ ಮುಖ ವಿಕಾರವಾಗಬೇಕು ಅಥವಾ ಆಕೆ ಸಾಯಬೇಕು ಎಂಬ ಉದ್ದೇಶದಿಂದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊರಿಯರ್ ಮೂಲಕ ಬಂದ ಮಿಕ್ಸರ್ ಅನ್ನು ಡಿಸೆಂಬರ್ 17ರಂದೇ ಕೊರಿಯರ್ ಮಾಲೀಕ ಶಶಿ ಡೆಲಿವರಿ ಮಾಡಿಸಿದ್ದರು. ಆದರೆ ಅದನ್ನು ನಿರಾಕರಿಸಿದ್ದ ಮಹಿಳೆ ವಾಪಸ್ ಕಳುಹಿಸುವಂತೆ ಕೊರಿಯರ್ನವರಿಗೆ ತಿಳಿಸಿದ್ದರು. ಕೊರಿಯರ್ ಮಾಡಿದವರ ಪೂರ್ಣ ವಿಳಾಸ ಇಲ್ಲದ ಕಾರಣ ಅದನ್ನು ವಾಪಸ್ ಕಳಿಸಲು 350 ರೂ. ಶುಲ್ಕ ನೀಡಬೇಕೆಂದು ಕೊರಿಯರ್ ಮಾಲೀಕ ಕೇಳಿದ್ದರು. ಆದರೆ ಹಣ ನೀಡದೆ ಮಹಿಳೆ ವಾಪಸಾಗಿದ್ದರು. ವಾಪಸ್ ಕಳುಹಿಸಲು ಸೂಕ್ತ ವಿಳಾಸ ಇಲ್ಲದ ಕಾರಣ ಕೊರಿಯರ್ ಅಂಗಡಿ ಮಾಲೀಕ ಅದನ್ನು ಬಿಚ್ಚಿ ಪರಿಶೀಲನೆ ಮಾಡಿದ್ದರು. ಈ ವೇಳೆ ಸ್ಫೋಟ ಸಂಭವಿಸಿತ್ತು

andolanait

Recent Posts

ಮೈಸೂರು | ಅನಧಿಕೃತ ಪ್ಲೇಕ್ಸ್, ಬ್ಯಾನರ್ ತೆರವುಗೊಳಿಸಿ ; ಜಿಲ್ಲಾಧಿಕಾರಿ ಆದೇಶ

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…

12 mins ago

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

2 hours ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

2 hours ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

3 hours ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

3 hours ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

7 hours ago