ಜಿಲ್ಲೆಗಳು

ಹಾಸನ: ಗ್ರೈಂಡರ್ ಮಿಕ್ಸಿ ಸ್ಫೋಟ ಆರೋಪಿ ಬಂಧನ

 ವಿಚ್ಛೇದಿತ ಮಹಿಳೆಗೆ ಪಾಠ ಕಲಿಸಲು ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ ಭಗ್ನಪ್ರೇಮಿ

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ನಲ್ಲಿ ನಡೆದಿದ್ದ ಮಿಕ್ಸರ್ ಸ್ಫೋಟ ಪ್ರಕರಣದ ರಹಸ್ಯ ಬಯಲಾಗಿದ್ದು ಇದು  ಮದುವೆ ನಿರಾಕರಿಸಿದ್ದಕ್ಕೆ ವಿಚ್ಛೇದಿತ ಮಹಿಳೆಯ ಹತ್ಯೆಗೆ ಸಂಚು ರೂಪಿಸಿದ ಪ್ರಕರಣ ಎಂಬುದು ಬೆಳಕಿಗೆ ಬಂದಿದೆ.
ಬೆಂಗಳೂರಿನ ಅನೂಪ್ ಕುಮಾರ್ ಎಂಬಾತ ಮಹಿಳೆಯ ಹತ್ಯೆಗೆ ಸಂಚು ರೂಪಿಸಿ ಮಿಕ್ಸರ್ನಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ್ದ ಎಂಬುದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮಂಗಳೂರಿನ ಕುಕ್ಕರ್ ಸ್ಫೋಟದ ಕಹಿ ನೆನೆಪು ಮಾಸುವ ಬೆನ್ನಲ್ಲೇ ಹಾಸನದಲ್ಲಿ ಡಿಸೆಂಬರ್ 26ರಂದು ಸಂಜೆ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ಸ್ಫೋಟಗೊಂಡಿತ್ತು. ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಇದೊಂದು ಪ್ರೇಮ ವೈಫಲ್ಯ ಪ್ರಕರಣವೆಂಬುದು ಗೊತ್ತಾಗಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ಹಾಸನದ ಮಹಿಳೆಯೊಬ್ಬರು ವಿವಾಹ ವಿಚ್ಛೇದನದ ನಂತರ ಮ್ಯಾಟ್ರಿಮೋನಿಯಲ್ಲಿ ತನ್ನ ಫೋಟೋ ಅಪ್ಲೋಡ್ ಮಾಡಿದ್ದರು. ಮಹಿಳೆಯ ಅಂದಕ್ಕೆ ಮಾರುಹೋಗಿ ಬೆಂಗಳೂರು ಮೂಲದ ಅನೂಪ್ ಮದುವೆ ಪ್ರಸ್ತಾಪ ಮಾಡಿದ್ದರು. ಇದನ್ನು ಒಪ್ಪಿಕೊಂಡಿದ್ದ ಮಹಿಳೆ ಅನೂಪ್ ಜತೆ ಸುತ್ತಾಡಿದ್ದರು. ಅನೂಪ್ಕುಮಾರ್ ವಿಶ್ವಾಸ ಗಳಿಸಿ ಆತನಿಂದ ಲಕ್ಷಾಂತರ ರೂ. ಹಣ ಸಾಲ ಪಡೆದಿದ್ದರು ಎನ್ನಲಾಗಿದೆ.
ಮಹಿಳೆ ವಿರುದ್ಧ ಆಕ್ರೋಶಗೊಂಡು ಕೃತ್ಯ
ಕೊಟ್ಟ ಹಣ ವಾಪಸ್ ನೀಡದೆ, ಮದುವೆಗೂ ಒಪ್ಪದೆ ಮಹಿಳೆ ಅನೂಪ್ನಿಂದ ಅಂತರ ಕಾಯ್ದುಕೊಂಡಿದ್ದರು. ಇದರಿಂದ ತೀವ್ರ ನಿರಾಸೆಗೆ ಒಳಗಾದ ಆರೋಪಿ, ಒಂದೋ ಮದುವೆಯಾಗಬೇಕು ಇಲ್ಲವೇ ಹಣ ವಾಪಸ್ ನೀಡಬೇಕು ಎಂದು ಮಹಿಳೆಗೆ ತಿಳಿಸಿದ್ದ. ಈ ಮಧ್ಯೆ, ಒಂದೆರಡು ಬಾರಿ ಹಾಸನಕ್ಕೆ ಬಂದು ಮಹಿಳೆ ಮನೆ ಎದುರು ಗಲಾಟೆ ಮಾಡಿದ್ದ. ಇದರ ಬೆನ್ನಲ್ಲೇ, ಅನೂಪ್ ವಿರುದ್ಧ ಪೊಲೀಸರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ಮಹಿಳೆ ದೂರು ನೀಡಿದ್ದರು.
ಮಿಕ್ಸರ್ನಲ್ಲಿ ಡಿಟೋನೇಟರ್ ಇಟ್ಟು ಕೊರಿಯರ್
ತನಗೆ ಮೋಸವಾಗಿದೆ ಎಂದು ಮಹಿಳೆ ವಿರುದ್ಧ ಕೆರಳಿದ ಅನೂಪ್ ಮೊದಲು ಸೀರೆ, ನಂತರ ಸೀರಿಯಲ್ ಸೆಟ್ ಪಾರ್ಸೆಲ್ ಕಳುಹಿಸಿದ್ದ. ಇದನ್ನು ನಿರಾಕರಿಸಿದ್ದ ಮಹಿಳೆ ಸೀರೆಯನ್ನು ವಾಪಾಸ್ ಕಳುಹಿಸಿ ನಿಂದಿಸಿದ್ದರು. ಹೀಗಾಗಿ ಮೂರನೇ ಬಾರಿ ಮಿಕ್ಸಿಯಲ್ಲಿ ಡಿಟೋನೇಟರ್ ಇಟ್ಟು ಕಳುಹಿಸಿದ್ದಾನೆ. ಮೋಸ ಮಾಡಿದವಳ ಮುಖ ವಿಕಾರವಾಗಬೇಕು ಅಥವಾ ಆಕೆ ಸಾಯಬೇಕು ಎಂಬ ಉದ್ದೇಶದಿಂದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊರಿಯರ್ ಮೂಲಕ ಬಂದ ಮಿಕ್ಸರ್ ಅನ್ನು ಡಿಸೆಂಬರ್ 17ರಂದೇ ಕೊರಿಯರ್ ಮಾಲೀಕ ಶಶಿ ಡೆಲಿವರಿ ಮಾಡಿಸಿದ್ದರು. ಆದರೆ ಅದನ್ನು ನಿರಾಕರಿಸಿದ್ದ ಮಹಿಳೆ ವಾಪಸ್ ಕಳುಹಿಸುವಂತೆ ಕೊರಿಯರ್ನವರಿಗೆ ತಿಳಿಸಿದ್ದರು. ಕೊರಿಯರ್ ಮಾಡಿದವರ ಪೂರ್ಣ ವಿಳಾಸ ಇಲ್ಲದ ಕಾರಣ ಅದನ್ನು ವಾಪಸ್ ಕಳಿಸಲು 350 ರೂ. ಶುಲ್ಕ ನೀಡಬೇಕೆಂದು ಕೊರಿಯರ್ ಮಾಲೀಕ ಕೇಳಿದ್ದರು. ಆದರೆ ಹಣ ನೀಡದೆ ಮಹಿಳೆ ವಾಪಸಾಗಿದ್ದರು. ವಾಪಸ್ ಕಳುಹಿಸಲು ಸೂಕ್ತ ವಿಳಾಸ ಇಲ್ಲದ ಕಾರಣ ಕೊರಿಯರ್ ಅಂಗಡಿ ಮಾಲೀಕ ಅದನ್ನು ಬಿಚ್ಚಿ ಪರಿಶೀಲನೆ ಮಾಡಿದ್ದರು. ಈ ವೇಳೆ ಸ್ಫೋಟ ಸಂಭವಿಸಿತ್ತು

andolanait

Recent Posts

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

2 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

2 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

2 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

2 hours ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

8 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

8 hours ago