ಜಿಲ್ಲೆಗಳು

ಹಾಸನ ತಾಯಿ, ಮಕ್ಕಳ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್‌

ಹೊಸ ವರ್ಷದ ದಿನವೇ ಹಾಸನದ ದಾಸರಕೊಪ್ಪದಲ್ಲಿ ತಾಯಿ ಹಾಗೂ ಮಕ್ಕಳಿಬ್ಬರು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದರು. ತುಮಕೂರಿನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಪತಿ ತೀರ್ಥಪ್ರಸಾದ್‌ ಪತ್ನಿ ಶಿವಮ್ಮ ಹಾಗೂ ಮಕ್ಕಳಾದ ಸಿಂಚನಾ ಹಾಗೂ ಪವನ್‌ರನ್ನು ನೋಡಲು ಮನೆಗೆ ಬಂದಿದ್ದ. ರಾತ್ರಿ ಬಾಗಿಲು ತೆಗೆಯದ ಕಾರಣ ಮನೆ ಮೇಲೆ ಮಲಗಿದ್ದ. ಇನ್ನು ಬೆಳಗ್ಗೆಯೂ ಬಾಗಿಲು ತೆರೆಯದ ಕಾರಣ ಬಾಗಿಲು ಒಡೆದು ಒಳಹೋಗಿದ್ದ ಪತಿಗೆ ಪತ್ನಿ ಹಾಗೂ ಮಕ್ಕಳ ಶವ ದೊರಕಿತ್ತು.

ಮೊದಲಿಗೆ ಅನಿಲ ಸೋರಿಕೆಯಿಂದ ಸಾವು ಸಂಭವಿಸಿದೆ ಎಂದು ಹೇಳಲಾಗಿತ್ತಾದರೂ ಇದೀಗ ಪೊಲೀಸ್‌ ತನಿಖೆಯಿಂದ ಸತ್ಯಾಂಶ ಹೊರಬಿದ್ದಿದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಮೊದಲಿಗೆ ಪತಿ ತೀರ್ಥಪ್ರಸಾದ್‌ ವಿಜಯಪುರದಲ್ಲಿ ಬೇಕರಿ ನಡೆಸುತ್ತಿದ್ದ ಈ ಸಂದರ್ಭದಲ್ಲಿ ಶಿವಮ್ಮಗೆ ನಿಂಗಪ್ಪ ಕಾಗವಾಡನ ಪರಿಚಯವಾಗಿತ್ತು. ಆ ಬಳಿಕ ವಿಜಯಪುರದಲ್ಲಿ ನಷ್ಟ ಅನುಭವಿಸಿದ ತೀರ್ಥಪ್ರಸಾದ್‌ ತುಮಕೂರಿನಲ್ಲಿ ಬೇಕರಿ ತೆರೆದಿದ್ದ. ಇತ್ತ ಪತ್ನಿ ಹಾಸನದಲ್ಲಿ ಮಕ್ಕಳೊಂದಿಗೆ ವಾಸವಿದ್ದಳು. ಗಂಡ ತಿಂಗಳಿಗೊಮ್ಮೆ ಮನೆಗೆ ಬರುತ್ತಿದ್ದದ್ದನ್ನೇ ಅನುಕೂಲ ಮಾಡಿಕೊಂಡ ಶಿವಮ್ಮ ನಿಂಗಪ್ಪ ಜತೆ ಅಕ್ರಮ ಸಂಬಂಧ ಬೆಳೆಸಿದ್ದಳು.

ಆದರೆ ಅದೇನಾಯಿತೋ ಏನೋ ಹೊಸವರ್ಷದ ದಿನ ಮನೆಗೆ ಭೇಟಿ ನೀಡಿದ್ದ ನಿಂಗಪ್ಪ ಶಿವಮ್ಮ ಹಾಗೂ ಮಕ್ಕಳನ್ನು ಕತ್ತು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

andolana

Recent Posts

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

6 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

29 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

48 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

3 hours ago