ಜಿಲ್ಲೆಗಳು

ಹಾಸನ ತಾಯಿ, ಮಕ್ಕಳ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್‌

ಹೊಸ ವರ್ಷದ ದಿನವೇ ಹಾಸನದ ದಾಸರಕೊಪ್ಪದಲ್ಲಿ ತಾಯಿ ಹಾಗೂ ಮಕ್ಕಳಿಬ್ಬರು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದರು. ತುಮಕೂರಿನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಪತಿ ತೀರ್ಥಪ್ರಸಾದ್‌ ಪತ್ನಿ ಶಿವಮ್ಮ ಹಾಗೂ ಮಕ್ಕಳಾದ ಸಿಂಚನಾ ಹಾಗೂ ಪವನ್‌ರನ್ನು ನೋಡಲು ಮನೆಗೆ ಬಂದಿದ್ದ. ರಾತ್ರಿ ಬಾಗಿಲು ತೆಗೆಯದ ಕಾರಣ ಮನೆ ಮೇಲೆ ಮಲಗಿದ್ದ. ಇನ್ನು ಬೆಳಗ್ಗೆಯೂ ಬಾಗಿಲು ತೆರೆಯದ ಕಾರಣ ಬಾಗಿಲು ಒಡೆದು ಒಳಹೋಗಿದ್ದ ಪತಿಗೆ ಪತ್ನಿ ಹಾಗೂ ಮಕ್ಕಳ ಶವ ದೊರಕಿತ್ತು.

ಮೊದಲಿಗೆ ಅನಿಲ ಸೋರಿಕೆಯಿಂದ ಸಾವು ಸಂಭವಿಸಿದೆ ಎಂದು ಹೇಳಲಾಗಿತ್ತಾದರೂ ಇದೀಗ ಪೊಲೀಸ್‌ ತನಿಖೆಯಿಂದ ಸತ್ಯಾಂಶ ಹೊರಬಿದ್ದಿದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಮೊದಲಿಗೆ ಪತಿ ತೀರ್ಥಪ್ರಸಾದ್‌ ವಿಜಯಪುರದಲ್ಲಿ ಬೇಕರಿ ನಡೆಸುತ್ತಿದ್ದ ಈ ಸಂದರ್ಭದಲ್ಲಿ ಶಿವಮ್ಮಗೆ ನಿಂಗಪ್ಪ ಕಾಗವಾಡನ ಪರಿಚಯವಾಗಿತ್ತು. ಆ ಬಳಿಕ ವಿಜಯಪುರದಲ್ಲಿ ನಷ್ಟ ಅನುಭವಿಸಿದ ತೀರ್ಥಪ್ರಸಾದ್‌ ತುಮಕೂರಿನಲ್ಲಿ ಬೇಕರಿ ತೆರೆದಿದ್ದ. ಇತ್ತ ಪತ್ನಿ ಹಾಸನದಲ್ಲಿ ಮಕ್ಕಳೊಂದಿಗೆ ವಾಸವಿದ್ದಳು. ಗಂಡ ತಿಂಗಳಿಗೊಮ್ಮೆ ಮನೆಗೆ ಬರುತ್ತಿದ್ದದ್ದನ್ನೇ ಅನುಕೂಲ ಮಾಡಿಕೊಂಡ ಶಿವಮ್ಮ ನಿಂಗಪ್ಪ ಜತೆ ಅಕ್ರಮ ಸಂಬಂಧ ಬೆಳೆಸಿದ್ದಳು.

ಆದರೆ ಅದೇನಾಯಿತೋ ಏನೋ ಹೊಸವರ್ಷದ ದಿನ ಮನೆಗೆ ಭೇಟಿ ನೀಡಿದ್ದ ನಿಂಗಪ್ಪ ಶಿವಮ್ಮ ಹಾಗೂ ಮಕ್ಕಳನ್ನು ಕತ್ತು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

andolana

Recent Posts

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…

14 mins ago

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

22 mins ago

ಓದುಗರ ಪತ್ರ: ಯುದ್ಧ-ಬುದ್ಧ

ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ…

40 mins ago

ಓದುಗರ ಪತ್ರ: ಸಾರಿಗೆ ಬಸ್‌ನಲ್ಲಿ ಕುಡಿಯುವ ನೀರು ವ್ಯವಸ್ಥೆ!

ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ…

44 mins ago

ಓದುಗರ ಪತ್ರ: ಲಿಂಗಾಂಬುಧಿ ಕೆರೆ ಏರಿ ಬೀದಿ ದೀಪ ಸರಿಪಡಿಸಿ

ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ…

46 mins ago

ಓದುಗರ ಪತ್ರ: ಕಿಸಾನ್ ಸಮಾನ್ ಸರ್ವರ್ ಸಮಸ್ಯೆ ನಿವಾರಿಸಿ

ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ.…

49 mins ago