ಜಿಲ್ಲೆಗಳು

ಹಾಸನ ತಾಯಿ, ಮಕ್ಕಳ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್‌

ಹೊಸ ವರ್ಷದ ದಿನವೇ ಹಾಸನದ ದಾಸರಕೊಪ್ಪದಲ್ಲಿ ತಾಯಿ ಹಾಗೂ ಮಕ್ಕಳಿಬ್ಬರು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದರು. ತುಮಕೂರಿನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಪತಿ ತೀರ್ಥಪ್ರಸಾದ್‌ ಪತ್ನಿ ಶಿವಮ್ಮ ಹಾಗೂ ಮಕ್ಕಳಾದ ಸಿಂಚನಾ ಹಾಗೂ ಪವನ್‌ರನ್ನು ನೋಡಲು ಮನೆಗೆ ಬಂದಿದ್ದ. ರಾತ್ರಿ ಬಾಗಿಲು ತೆಗೆಯದ ಕಾರಣ ಮನೆ ಮೇಲೆ ಮಲಗಿದ್ದ. ಇನ್ನು ಬೆಳಗ್ಗೆಯೂ ಬಾಗಿಲು ತೆರೆಯದ ಕಾರಣ ಬಾಗಿಲು ಒಡೆದು ಒಳಹೋಗಿದ್ದ ಪತಿಗೆ ಪತ್ನಿ ಹಾಗೂ ಮಕ್ಕಳ ಶವ ದೊರಕಿತ್ತು.

ಮೊದಲಿಗೆ ಅನಿಲ ಸೋರಿಕೆಯಿಂದ ಸಾವು ಸಂಭವಿಸಿದೆ ಎಂದು ಹೇಳಲಾಗಿತ್ತಾದರೂ ಇದೀಗ ಪೊಲೀಸ್‌ ತನಿಖೆಯಿಂದ ಸತ್ಯಾಂಶ ಹೊರಬಿದ್ದಿದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಮೊದಲಿಗೆ ಪತಿ ತೀರ್ಥಪ್ರಸಾದ್‌ ವಿಜಯಪುರದಲ್ಲಿ ಬೇಕರಿ ನಡೆಸುತ್ತಿದ್ದ ಈ ಸಂದರ್ಭದಲ್ಲಿ ಶಿವಮ್ಮಗೆ ನಿಂಗಪ್ಪ ಕಾಗವಾಡನ ಪರಿಚಯವಾಗಿತ್ತು. ಆ ಬಳಿಕ ವಿಜಯಪುರದಲ್ಲಿ ನಷ್ಟ ಅನುಭವಿಸಿದ ತೀರ್ಥಪ್ರಸಾದ್‌ ತುಮಕೂರಿನಲ್ಲಿ ಬೇಕರಿ ತೆರೆದಿದ್ದ. ಇತ್ತ ಪತ್ನಿ ಹಾಸನದಲ್ಲಿ ಮಕ್ಕಳೊಂದಿಗೆ ವಾಸವಿದ್ದಳು. ಗಂಡ ತಿಂಗಳಿಗೊಮ್ಮೆ ಮನೆಗೆ ಬರುತ್ತಿದ್ದದ್ದನ್ನೇ ಅನುಕೂಲ ಮಾಡಿಕೊಂಡ ಶಿವಮ್ಮ ನಿಂಗಪ್ಪ ಜತೆ ಅಕ್ರಮ ಸಂಬಂಧ ಬೆಳೆಸಿದ್ದಳು.

ಆದರೆ ಅದೇನಾಯಿತೋ ಏನೋ ಹೊಸವರ್ಷದ ದಿನ ಮನೆಗೆ ಭೇಟಿ ನೀಡಿದ್ದ ನಿಂಗಪ್ಪ ಶಿವಮ್ಮ ಹಾಗೂ ಮಕ್ಕಳನ್ನು ಕತ್ತು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

andolana

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

1 hour ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

2 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

2 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

2 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago