ಜಿಲ್ಲೆಗಳು

ಹಾಸನ ತಾಯಿ, ಮಕ್ಕಳ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್‌

ಹೊಸ ವರ್ಷದ ದಿನವೇ ಹಾಸನದ ದಾಸರಕೊಪ್ಪದಲ್ಲಿ ತಾಯಿ ಹಾಗೂ ಮಕ್ಕಳಿಬ್ಬರು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದರು. ತುಮಕೂರಿನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಪತಿ ತೀರ್ಥಪ್ರಸಾದ್‌ ಪತ್ನಿ ಶಿವಮ್ಮ ಹಾಗೂ ಮಕ್ಕಳಾದ ಸಿಂಚನಾ ಹಾಗೂ ಪವನ್‌ರನ್ನು ನೋಡಲು ಮನೆಗೆ ಬಂದಿದ್ದ. ರಾತ್ರಿ ಬಾಗಿಲು ತೆಗೆಯದ ಕಾರಣ ಮನೆ ಮೇಲೆ ಮಲಗಿದ್ದ. ಇನ್ನು ಬೆಳಗ್ಗೆಯೂ ಬಾಗಿಲು ತೆರೆಯದ ಕಾರಣ ಬಾಗಿಲು ಒಡೆದು ಒಳಹೋಗಿದ್ದ ಪತಿಗೆ ಪತ್ನಿ ಹಾಗೂ ಮಕ್ಕಳ ಶವ ದೊರಕಿತ್ತು.

ಮೊದಲಿಗೆ ಅನಿಲ ಸೋರಿಕೆಯಿಂದ ಸಾವು ಸಂಭವಿಸಿದೆ ಎಂದು ಹೇಳಲಾಗಿತ್ತಾದರೂ ಇದೀಗ ಪೊಲೀಸ್‌ ತನಿಖೆಯಿಂದ ಸತ್ಯಾಂಶ ಹೊರಬಿದ್ದಿದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಮೊದಲಿಗೆ ಪತಿ ತೀರ್ಥಪ್ರಸಾದ್‌ ವಿಜಯಪುರದಲ್ಲಿ ಬೇಕರಿ ನಡೆಸುತ್ತಿದ್ದ ಈ ಸಂದರ್ಭದಲ್ಲಿ ಶಿವಮ್ಮಗೆ ನಿಂಗಪ್ಪ ಕಾಗವಾಡನ ಪರಿಚಯವಾಗಿತ್ತು. ಆ ಬಳಿಕ ವಿಜಯಪುರದಲ್ಲಿ ನಷ್ಟ ಅನುಭವಿಸಿದ ತೀರ್ಥಪ್ರಸಾದ್‌ ತುಮಕೂರಿನಲ್ಲಿ ಬೇಕರಿ ತೆರೆದಿದ್ದ. ಇತ್ತ ಪತ್ನಿ ಹಾಸನದಲ್ಲಿ ಮಕ್ಕಳೊಂದಿಗೆ ವಾಸವಿದ್ದಳು. ಗಂಡ ತಿಂಗಳಿಗೊಮ್ಮೆ ಮನೆಗೆ ಬರುತ್ತಿದ್ದದ್ದನ್ನೇ ಅನುಕೂಲ ಮಾಡಿಕೊಂಡ ಶಿವಮ್ಮ ನಿಂಗಪ್ಪ ಜತೆ ಅಕ್ರಮ ಸಂಬಂಧ ಬೆಳೆಸಿದ್ದಳು.

ಆದರೆ ಅದೇನಾಯಿತೋ ಏನೋ ಹೊಸವರ್ಷದ ದಿನ ಮನೆಗೆ ಭೇಟಿ ನೀಡಿದ್ದ ನಿಂಗಪ್ಪ ಶಿವಮ್ಮ ಹಾಗೂ ಮಕ್ಕಳನ್ನು ಕತ್ತು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

andolana

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

40 mins ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

43 mins ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

49 mins ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

52 mins ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

12 hours ago