Mysore
30
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೇಬೀಡಿನ ಘಟ್ಟದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿ.ಕೆ.ಮಲ್ಲೇಶ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ನಿವೃತ್ತ ಯೋಧ. ಕಲ್ಲೇಶ್‌ ಎರಡು ಮದುವೆಯಾಗಿದ್ದರು. ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಯನ್ನೂ ಪಡೆಯುತ್ತಿದ್ದರು.

ಎರಡು ದಿನಗಳ ಹಿಂದೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ನಿ ಬಳಿ ಹೇಳಿದ್ದರಂತೆ. ಪತ್ನಿ ಸಮಾಧಾನಪಡಿಸಿದ್ದರು. ಆದರೆ ಇಂದು ಬೆಳಿಗ್ಗೆ ಸಕಲೇಶಪುರ ಪೊಲೀಸ್‌ ಠಾಣೆಗೆ ಕರೆ ಮಾಡಿದ್ದ ಕಲ್ಲೇಶ್‌, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಫೋನ್‌ ಕಟ್‌ ಮಾಡಿದ್ದಾರೆ. ತಕ್ಷಣ ಹಳೇಬೀಡು ಪೊಲೀಸರಿಗೆ ಸಕಲೇಶಪುರ ಪೊಲೀಸರು ಮಾಹಿತಿ ನೀಡಿ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದರು. ಘಟ್ಟದಹಳ್ಳಿ ಗ್ರಾಮಕ್ಕೆ ಪೊಲೀಸರು ಬರುವಷ್ಟರಲ್ಲಿ ಕಲ್ಲೇಶ್‌ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Tags:
error: Content is protected !!