ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೇಬೀಡಿನ ಘಟ್ಟದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿ.ಕೆ.ಮಲ್ಲೇಶ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ನಿವೃತ್ತ ಯೋಧ. ಕಲ್ಲೇಶ್ ಎರಡು ಮದುವೆಯಾಗಿದ್ದರು. ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಯನ್ನೂ ಪಡೆಯುತ್ತಿದ್ದರು.
ಎರಡು ದಿನಗಳ ಹಿಂದೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ನಿ ಬಳಿ ಹೇಳಿದ್ದರಂತೆ. ಪತ್ನಿ ಸಮಾಧಾನಪಡಿಸಿದ್ದರು. ಆದರೆ ಇಂದು ಬೆಳಿಗ್ಗೆ ಸಕಲೇಶಪುರ ಪೊಲೀಸ್ ಠಾಣೆಗೆ ಕರೆ ಮಾಡಿದ್ದ ಕಲ್ಲೇಶ್, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಫೋನ್ ಕಟ್ ಮಾಡಿದ್ದಾರೆ. ತಕ್ಷಣ ಹಳೇಬೀಡು ಪೊಲೀಸರಿಗೆ ಸಕಲೇಶಪುರ ಪೊಲೀಸರು ಮಾಹಿತಿ ನೀಡಿ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದರು. ಘಟ್ಟದಹಳ್ಳಿ ಗ್ರಾಮಕ್ಕೆ ಪೊಲೀಸರು ಬರುವಷ್ಟರಲ್ಲಿ ಕಲ್ಲೇಶ್ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…