ಹಾಸನ: ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಬೇಸರ ಹೊರಹಾಕಿದ್ದಾರೆ.
ಈ ಬಗ್ಗೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಮಾತನಾಡಿದ ಅವರು, ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾದ, ವಿವಾದ, ಪ್ರತಿವಾದ ಟೀಕೆ ಸಹಜ. ಅದು ಇಲ್ಲದೇ ಇದ್ದರೇ ಚಮಚಾಗಿರಿ ಮಾಡಿಕೊಂಡು ಕೂರಬೇಕಾಗುತ್ತದೆ. ಯಾರನ್ನೋ ಮೆಚ್ಚಿಸಲು ನೀನು ಸತ್ಯವಂತ ಎಂದು ಹೇಳೋದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಭ್ರಷ್ಟನನ್ನು ಭ್ರಷ್ಟ ಎಂದೇ ಹೇಳಬೇಕು. ಹಾಗೆ ಹೇಳಿದರೆ ವಿಶ್ವನಾಥ್ ಎಲ್ಲರ ಬಗ್ಗೆನೂ ಮಾತನಾಡುತ್ತಾನೆ ಅಂತಾರೆ. ಜನತಂತ್ರ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಇಲ್ಲದೇ ಬರೀ ಹೊಗಳಿಕೆ ಇದ್ದರೆ ಹೇಗೆ.? ಎಲ್ಲಾ ರಾಜಕೀಯ ಪಕ್ಷಗಳು ಹೊಗಳಿಕೆಯಿಂದಲೇ ಹಾಳಾಗಿ ಹೋಗಿವೆ. ಒಂದು ಪಕ್ಷದ ಕಾರ್ಯಕರ್ತರು ನಾಯಕ ಏನೇ ತಪ್ಪು ಮಾಡಿದರೂ ಅವನನ್ನು ಹೊಗಳುತ್ತಾರೆ. ನೀನು ತಪ್ಪು ಮಾಡಿದ್ದೀಯ ಅಂತ ಹೇಳುವುದಿಲ್ಲ. ಹಾಗಾಗಿ ಇವತ್ತು ಪಕ್ಷ ರಾಜಕಾರಣ ಹಾಳಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಇಂದು ಹೊಗಳುವಿಕೆಯಿಂದ ಪಕ್ಷ ರಾಜಕಾರಣ ಹಾಳಾಗಿ, ವ್ಯಕ್ತಿ ರಾಜಕಾರಣ ಮೆರೆಯುತ್ತಿದೆ. ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಹೀಗೆ ವ್ಯಕ್ತಿ ರಾಜಕಾರಣ ಶುರುವಾಗಿದೆ. ದೇಶದಲ್ಲೇ ಈಗ ಪಕ್ಷ ರಾಜಕಾರಣ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…