ಹಾಸನ: ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದವರು ನಿರುದ್ಯೋಗಿಗಳಾಗುತ್ತಾರೆ ಎನ್ನಲು ಮತದಾರರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೇಬಿನಲ್ಲಿದ್ದಾರೆಯೇ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಪ್ರಶ್ನಿಸಿದ್ದಾರೆ.
ಚುನಾವಣೆಯಲ್ಲಿ ಮತ ಹಾಕುವುದು ಜಿಲ್ಲೆಯ ಹಾಗೂ ನಾಡಿನ ಜನರು. ಅವರೆಲ್ಲಾ ಕಟೀಲ್ ಅವರ ಹಿಡಿತದಲ್ಲಿ ಇದ್ದಾರೆಯೇ ಎಂಬುದನ್ನು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲಿ” ಎಂದು ಟಾಂಗ್ ನೀಡಿದ್ದಾರೆ.
ರಾಷ್ಟ್ರೀಯವಾದಿ ಹೆಸರಿನಲ್ಲಿ ಬಿಜೆಪಿ ಯವರು ಮಾಡುತ್ತಿರುವ ಕೋಮುವಾದ, ದ್ವೇಷ ರಾಜಕೀಯ, ಆಪರೇಷನ್ ಕಮಲ ದಂತಹ ರಾಜಕಾರಣ ವನ್ನು ಜೆಡಿಎಸ್ ನಾಯಕರು ಎಂದೂ ಮಾಡಿಲ್ಲ. ವಿಶ್ವದಲ್ಲೇ ದೊಡ್ಡ ಪಾರ್ಟಿ ಎಂದುಕೊಳ್ಳುವ ಬಿಜೆಪಿಯವರು ಬೇರೆ ಪಕ್ಷಗಳಿಂದ ಅನೇಕರನ್ನು ಬಿಜೆಪಿಗೆ ಕರೆತರಲು ಅಡ್ಡ ರಾಜಕಾರಣ ಮಾಡುತ್ತಿರುವುದೇಕೆ? ಎಂದು ಪ್ರಶ್ನಿಸಿದರು.
ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ನೀಡಿರುವ ಸ್ವಚ್ಛ ಹಾಗೂ ಪ್ರಾಮಾಣಿಕ ಆಡಳಿತದ ಬಗ್ಗೆ ನಾಡಿನ, ದೇಶದ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಧಿಕಾರ ನಡೆಸಿದ ಅವಧಿಯಲ್ಲಿಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕೆ ಇಲ್ಲದಂತೆ ಅಧಿಕಾರ ನಡೆಸಿದ್ದಾರೆ. ಅಂಥವರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ ಎಂದಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…