ಹಾಸನ: ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದವರು ನಿರುದ್ಯೋಗಿಗಳಾಗುತ್ತಾರೆ ಎನ್ನಲು ಮತದಾರರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೇಬಿನಲ್ಲಿದ್ದಾರೆಯೇ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಪ್ರಶ್ನಿಸಿದ್ದಾರೆ.
ಚುನಾವಣೆಯಲ್ಲಿ ಮತ ಹಾಕುವುದು ಜಿಲ್ಲೆಯ ಹಾಗೂ ನಾಡಿನ ಜನರು. ಅವರೆಲ್ಲಾ ಕಟೀಲ್ ಅವರ ಹಿಡಿತದಲ್ಲಿ ಇದ್ದಾರೆಯೇ ಎಂಬುದನ್ನು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲಿ” ಎಂದು ಟಾಂಗ್ ನೀಡಿದ್ದಾರೆ.
ರಾಷ್ಟ್ರೀಯವಾದಿ ಹೆಸರಿನಲ್ಲಿ ಬಿಜೆಪಿ ಯವರು ಮಾಡುತ್ತಿರುವ ಕೋಮುವಾದ, ದ್ವೇಷ ರಾಜಕೀಯ, ಆಪರೇಷನ್ ಕಮಲ ದಂತಹ ರಾಜಕಾರಣ ವನ್ನು ಜೆಡಿಎಸ್ ನಾಯಕರು ಎಂದೂ ಮಾಡಿಲ್ಲ. ವಿಶ್ವದಲ್ಲೇ ದೊಡ್ಡ ಪಾರ್ಟಿ ಎಂದುಕೊಳ್ಳುವ ಬಿಜೆಪಿಯವರು ಬೇರೆ ಪಕ್ಷಗಳಿಂದ ಅನೇಕರನ್ನು ಬಿಜೆಪಿಗೆ ಕರೆತರಲು ಅಡ್ಡ ರಾಜಕಾರಣ ಮಾಡುತ್ತಿರುವುದೇಕೆ? ಎಂದು ಪ್ರಶ್ನಿಸಿದರು.
ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ನೀಡಿರುವ ಸ್ವಚ್ಛ ಹಾಗೂ ಪ್ರಾಮಾಣಿಕ ಆಡಳಿತದ ಬಗ್ಗೆ ನಾಡಿನ, ದೇಶದ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಧಿಕಾರ ನಡೆಸಿದ ಅವಧಿಯಲ್ಲಿಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕೆ ಇಲ್ಲದಂತೆ ಅಧಿಕಾರ ನಡೆಸಿದ್ದಾರೆ. ಅಂಥವರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ ಎಂದಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…