ಹಾಸನ

ಜೆ ಡಿ ಎಸ್‌ ಪಕ್ಷದ ಮತದಾರರು ಕಟೀಲ್‌ ಹಿಡಿತದಲ್ಲಿ ಇದ್ದಾರೆಯೇ..? : ಜೆ ಡಿ ಎಸ್‌ ವಕ್ತಾರ ಆಕ್ರೋಶ

ಹಾಸನಮುಂದಿನ ವಿಧಾನಸಭೆ ಚುನಾವಣೆ ಬಳಿಕ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದವರು ನಿರುದ್ಯೋಗಿಗಳಾಗುತ್ತಾರೆ ಎನ್ನಲು ಮತದಾರರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಜೇಬಿನಲ್ಲಿದ್ದಾರೆಯೇ ಎಂದು ಜಿಲ್ಲಾ ಜೆಡಿಎಸ್‌ ವಕ್ತಾರ ರಘು ಹೊಂಗೆರೆ ಪ್ರಶ್ನಿಸಿದ್ದಾರೆ.

 ಚುನಾವಣೆಯಲ್ಲಿ ಮತ ಹಾಕುವುದು ಜಿಲ್ಲೆಯ ಹಾಗೂ ನಾಡಿನ ಜನರು. ಅವರೆಲ್ಲಾ ಕಟೀಲ್‌ ಅವರ ಹಿಡಿತದಲ್ಲಿ ಇದ್ದಾರೆಯೇ ಎಂಬುದನ್ನು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲಿ” ಎಂದು ಟಾಂಗ್‌ ನೀಡಿದ್ದಾರೆ.

ರಾಷ್ಟ್ರೀಯವಾದಿ ಹೆಸರಿನಲ್ಲಿ ಬಿಜೆಪಿ ಯವರು ಮಾಡುತ್ತಿರುವ ಕೋಮುವಾದ, ದ್ವೇಷ ರಾಜಕೀಯ, ಆಪರೇಷನ್‌ ಕಮಲ ದಂತಹ ರಾಜಕಾರಣ ವನ್ನು ಜೆಡಿಎಸ್‌ ನಾಯಕರು ಎಂದೂ ಮಾಡಿಲ್ಲ. ವಿಶ್ವದಲ್ಲೇ ದೊಡ್ಡ ಪಾರ್ಟಿ ಎಂದುಕೊಳ್ಳುವ ಬಿಜೆಪಿಯವರು ಬೇರೆ ಪಕ್ಷಗಳಿಂದ ಅನೇಕರನ್ನು ಬಿಜೆಪಿಗೆ ಕರೆತರಲು ಅಡ್ಡ ರಾಜಕಾರಣ ಮಾಡುತ್ತಿರುವುದೇಕೆ? ಎಂದು ಪ್ರಶ್ನಿಸಿದರು.

ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ನೀಡಿರುವ ಸ್ವಚ್ಛ ಹಾಗೂ ಪ್ರಾಮಾಣಿಕ ಆಡಳಿತದ ಬಗ್ಗೆ ನಾಡಿನ, ದೇಶದ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಧಿಕಾರ ನಡೆಸಿದ ಅವಧಿಯಲ್ಲಿಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕೆ ಇಲ್ಲದಂತೆ ಅಧಿಕಾರ ನಡೆಸಿದ್ದಾರೆ. ಅಂಥವರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ ಎಂದಿದ್ದಾರೆ.

andolana

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

1 hour ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago