ಹಾಸನ

ಕುಮಾರಸ್ವಾಮಿ ಕೈಯಲ್ಲಿ ಆಗಲ್ಲ ಅಂದರೆ ನೀವು ಬಂದು ಕೆಲಸ ಮಾಡಿ ; ಡಿಕೆಶಿಗೆ ಅಶೋಕ್ ಟಾಂಗ್

ಹಾಸನ : ಕೇಂದ್ರ ಸಚಿವರು ಬಂದರೆ ಪರಿಹಾರ ಸಿಗಲ್ಲ ಅಂತೀರಾ,  ನೀವಾದರೂ ಬನ್ನಿ. ನಿಮಗೆ ಬರುವ ಯೋಗ್ಯತೆ ಇಲ್ವಾ  ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ವಿಪಕ್ಷ ನಾಯಕ ಆರ್‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಎಚ್.ಡಿ ಕುಮಾರಸ್ವಾಮಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡದರೆ ಏನು ಪ್ರಯೋಜನವಿಲ್ಲ ಎಂಬ ಡಿಕೆಶಿ ಹೇಳಿಕೆ ಪ್ರತಿಕ್ರಿಯಿಸಿದ ಅಶೋಕ್‌, ಡಿಕೆ ಶಿವಕುಮಾರ್‌ ಬಂದರೆ ಪ್ರಯೋಜನ ಆಗುತ್ತ ಅಂದರೆ ಅವರು ಮನೆ ಬಿಟ್ಟು ಬರಬೇಕು. ಅವರು ಬರಲ್ಲ. ನೀವು ಬಂದು ಬೇರೆಯವರಿಗೆ ಬುದ್ದಿವಾದ ಹೇಳಿ. ನೀವು ಕೊಡುತ್ತಿರುವುದು NDRF ಹಣ. ನೀವು ನಯಾಪೈಸೆ ಕೊಟ್ಟಿಲ್ಲ. ಕುಮಾರಸ್ವಾಮಿ ಬರಲು ರೈಟ್ಸ್‌ ಇದೆ. ಕೇಳಲು ರೈಟ್ಸ್‌ ಇದೆ. ಕುಮಾರಸ್ವಾಮಿ ಕೇಂದ್ರ ಮಂತ್ರಿ ಇದ್ದಾರೆ. ರಾಷ್ಟ್ರೀಯ ಹೆದ್ದಾರಿ ಕೇಂದ್ರಕ್ಕೆ ಸೇರುತ್ತದೆ. ಎಲ್ಲರೂ ಒಕ್ಕೂಟದ ವ್ಯವಸ್ಥೆಯಲ್ಲಿದ್ದೀರಿ. ಕುಮಾರಸ್ವಾಮಿ ಅವರ ಕೈಯಲ್ಲಿ ಆಗಲ್ಲ ಅಂದರೆ ನೀವು ಬಂದು ಕೆಲಸ ಮಾಡಿ ಎಂದು ಕಿಡಿಕಾರಿದರು.

ಅಲ್ಲದೆ ಕುಮಾರಸ್ವಾಮಿ ದೇಶ ಎಲ್ಲಾ ಸುತ್ತಬೇಕು. ಅದರ ನಡುವೆ ಕರ್ನಾಟಕಕ್ಕೆ ಆದ್ಯತೆ ಕೊಟ್ಟು ಬರುತ್ತಿದ್ದಾರೆ. ನಿಮಗೆ ಯಾಕೆ ಬರಲು ಆಗುತ್ತಿಲ್ಲ. ಸರ್ಕಾರ ಸತ್ತು ಹೋಗಿದೆ. ಸರ್ಕಾರ ಬದುಕಿದ್ದರೆ ತಾನೇ ಏನಾದ್ರೂ ಕೇಳೋದು. ಸರ್ಕಾರ ಸ್ಕ್ಯಾಂಡಲ್‌ ಗಳಿಗೆ ಮುಳುಗಿ ಉತ್ತರ ಕೊಡಲು ಆಗುತ್ತಿಲ್ಲ. ಸರ್ಕಾರ ಬದುಕಿದೆ ಅಂತಾ ಮೊದಲು ತೋರಿಸಲಿ ಎಂದು ಹೇಳಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

6 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

9 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

9 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

10 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

10 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

10 hours ago