ಹಾಸನ : ಕೇಂದ್ರ ಸಚಿವರು ಬಂದರೆ ಪರಿಹಾರ ಸಿಗಲ್ಲ ಅಂತೀರಾ, ನೀವಾದರೂ ಬನ್ನಿ. ನಿಮಗೆ ಬರುವ ಯೋಗ್ಯತೆ ಇಲ್ವಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡದರೆ ಏನು ಪ್ರಯೋಜನವಿಲ್ಲ ಎಂಬ ಡಿಕೆಶಿ ಹೇಳಿಕೆ ಪ್ರತಿಕ್ರಿಯಿಸಿದ ಅಶೋಕ್, ಡಿಕೆ ಶಿವಕುಮಾರ್ ಬಂದರೆ ಪ್ರಯೋಜನ ಆಗುತ್ತ ಅಂದರೆ ಅವರು ಮನೆ ಬಿಟ್ಟು ಬರಬೇಕು. ಅವರು ಬರಲ್ಲ. ನೀವು ಬಂದು ಬೇರೆಯವರಿಗೆ ಬುದ್ದಿವಾದ ಹೇಳಿ. ನೀವು ಕೊಡುತ್ತಿರುವುದು NDRF ಹಣ. ನೀವು ನಯಾಪೈಸೆ ಕೊಟ್ಟಿಲ್ಲ. ಕುಮಾರಸ್ವಾಮಿ ಬರಲು ರೈಟ್ಸ್ ಇದೆ. ಕೇಳಲು ರೈಟ್ಸ್ ಇದೆ. ಕುಮಾರಸ್ವಾಮಿ ಕೇಂದ್ರ ಮಂತ್ರಿ ಇದ್ದಾರೆ. ರಾಷ್ಟ್ರೀಯ ಹೆದ್ದಾರಿ ಕೇಂದ್ರಕ್ಕೆ ಸೇರುತ್ತದೆ. ಎಲ್ಲರೂ ಒಕ್ಕೂಟದ ವ್ಯವಸ್ಥೆಯಲ್ಲಿದ್ದೀರಿ. ಕುಮಾರಸ್ವಾಮಿ ಅವರ ಕೈಯಲ್ಲಿ ಆಗಲ್ಲ ಅಂದರೆ ನೀವು ಬಂದು ಕೆಲಸ ಮಾಡಿ ಎಂದು ಕಿಡಿಕಾರಿದರು.
ಅಲ್ಲದೆ ಕುಮಾರಸ್ವಾಮಿ ದೇಶ ಎಲ್ಲಾ ಸುತ್ತಬೇಕು. ಅದರ ನಡುವೆ ಕರ್ನಾಟಕಕ್ಕೆ ಆದ್ಯತೆ ಕೊಟ್ಟು ಬರುತ್ತಿದ್ದಾರೆ. ನಿಮಗೆ ಯಾಕೆ ಬರಲು ಆಗುತ್ತಿಲ್ಲ. ಸರ್ಕಾರ ಸತ್ತು ಹೋಗಿದೆ. ಸರ್ಕಾರ ಬದುಕಿದ್ದರೆ ತಾನೇ ಏನಾದ್ರೂ ಕೇಳೋದು. ಸರ್ಕಾರ ಸ್ಕ್ಯಾಂಡಲ್ ಗಳಿಗೆ ಮುಳುಗಿ ಉತ್ತರ ಕೊಡಲು ಆಗುತ್ತಿಲ್ಲ. ಸರ್ಕಾರ ಬದುಕಿದೆ ಅಂತಾ ಮೊದಲು ತೋರಿಸಲಿ ಎಂದು ಹೇಳಿದ್ದಾರೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…