ಹಾಸನ

ಕುಮಾರಸ್ವಾಮಿ ಕೈಯಲ್ಲಿ ಆಗಲ್ಲ ಅಂದರೆ ನೀವು ಬಂದು ಕೆಲಸ ಮಾಡಿ ; ಡಿಕೆಶಿಗೆ ಅಶೋಕ್ ಟಾಂಗ್

ಹಾಸನ : ಕೇಂದ್ರ ಸಚಿವರು ಬಂದರೆ ಪರಿಹಾರ ಸಿಗಲ್ಲ ಅಂತೀರಾ,  ನೀವಾದರೂ ಬನ್ನಿ. ನಿಮಗೆ ಬರುವ ಯೋಗ್ಯತೆ ಇಲ್ವಾ  ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ವಿಪಕ್ಷ ನಾಯಕ ಆರ್‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಎಚ್.ಡಿ ಕುಮಾರಸ್ವಾಮಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡದರೆ ಏನು ಪ್ರಯೋಜನವಿಲ್ಲ ಎಂಬ ಡಿಕೆಶಿ ಹೇಳಿಕೆ ಪ್ರತಿಕ್ರಿಯಿಸಿದ ಅಶೋಕ್‌, ಡಿಕೆ ಶಿವಕುಮಾರ್‌ ಬಂದರೆ ಪ್ರಯೋಜನ ಆಗುತ್ತ ಅಂದರೆ ಅವರು ಮನೆ ಬಿಟ್ಟು ಬರಬೇಕು. ಅವರು ಬರಲ್ಲ. ನೀವು ಬಂದು ಬೇರೆಯವರಿಗೆ ಬುದ್ದಿವಾದ ಹೇಳಿ. ನೀವು ಕೊಡುತ್ತಿರುವುದು NDRF ಹಣ. ನೀವು ನಯಾಪೈಸೆ ಕೊಟ್ಟಿಲ್ಲ. ಕುಮಾರಸ್ವಾಮಿ ಬರಲು ರೈಟ್ಸ್‌ ಇದೆ. ಕೇಳಲು ರೈಟ್ಸ್‌ ಇದೆ. ಕುಮಾರಸ್ವಾಮಿ ಕೇಂದ್ರ ಮಂತ್ರಿ ಇದ್ದಾರೆ. ರಾಷ್ಟ್ರೀಯ ಹೆದ್ದಾರಿ ಕೇಂದ್ರಕ್ಕೆ ಸೇರುತ್ತದೆ. ಎಲ್ಲರೂ ಒಕ್ಕೂಟದ ವ್ಯವಸ್ಥೆಯಲ್ಲಿದ್ದೀರಿ. ಕುಮಾರಸ್ವಾಮಿ ಅವರ ಕೈಯಲ್ಲಿ ಆಗಲ್ಲ ಅಂದರೆ ನೀವು ಬಂದು ಕೆಲಸ ಮಾಡಿ ಎಂದು ಕಿಡಿಕಾರಿದರು.

ಅಲ್ಲದೆ ಕುಮಾರಸ್ವಾಮಿ ದೇಶ ಎಲ್ಲಾ ಸುತ್ತಬೇಕು. ಅದರ ನಡುವೆ ಕರ್ನಾಟಕಕ್ಕೆ ಆದ್ಯತೆ ಕೊಟ್ಟು ಬರುತ್ತಿದ್ದಾರೆ. ನಿಮಗೆ ಯಾಕೆ ಬರಲು ಆಗುತ್ತಿಲ್ಲ. ಸರ್ಕಾರ ಸತ್ತು ಹೋಗಿದೆ. ಸರ್ಕಾರ ಬದುಕಿದ್ದರೆ ತಾನೇ ಏನಾದ್ರೂ ಕೇಳೋದು. ಸರ್ಕಾರ ಸ್ಕ್ಯಾಂಡಲ್‌ ಗಳಿಗೆ ಮುಳುಗಿ ಉತ್ತರ ಕೊಡಲು ಆಗುತ್ತಿಲ್ಲ. ಸರ್ಕಾರ ಬದುಕಿದೆ ಅಂತಾ ಮೊದಲು ತೋರಿಸಲಿ ಎಂದು ಹೇಳಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

4 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

8 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

8 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

9 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

10 hours ago