ಹಾಸನ : ಒಕ್ಕಲಿಗರು, ಬ್ರಾಹ್ಮಣರು, ಲಿಂಗಾಯತರ ನಿಗಮ ಹಣವನ್ನೂ ಬಳಸಿಕೊಳ್ಳಿ ಅಂತಾ ಸರ್ಕಾರಕ್ಕೆ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬಳಿಕ ಮಾತನಾಡಿದ ಅವರು, ಸರ್ಕಾರ ಸ್ಕ್ಯಾಂಡಲ್ ಗಳಲ್ಲಿ ಸಿಲುಕಿಗೊಂಡಿದೆ. ಅದರಿಂದ ಹೊರಬರಲು ಅವರಿಗೆ ಆಗ್ತಿಲ್ಲ. ಅದಕ್ಕೆ ಅದರಲ್ಲಿ ಬ್ಯುಸಿ ಇದ್ದಾರೆ. ನಾನು ಕಂದಾಯ ಸಚಿವನಾಗಿ ಮಳೆ ಹಾನಿಗೆ ತುರ್ತು ಪರಿಹಾರ ನೀಡಿದ್ದೆ. ಇಲ್ಲಿ ಪರಿಹಾರ ಕೊಡಲು ಇನ್ನು ಶುರು ಮಾಡಿಲ್ಲ. ಕೇಂದ್ರ ಸರ್ಕಾರ ಕೊಟ್ಟಿರುವ ಹಣವನ್ನು ಇವರು ಕೊಡುತ್ತಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟಿರುವುದನ್ನು ನೀಡಿ ಕೈ ಚೆಲ್ಲಿ ಕೂರಬಾರದು. ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಸರ್ಕಾರ ಪಾಪರ್ ಆಗಿದೆ. ಕಳೆದ ಆರೇಳು ತಿಂಗಳಿಂದ ಅದೇ ಸ್ಥಿತಿಯಲ್ಲಿದೆ. ಈಗ ಗ್ಯಾರೆಂಟಿಗಾಗಿ ಟ್ಯಾಕ್ಸ್ ಹಾಕುತ್ತಿದ್ದಾರೆ. ದಲಿತರ ಹಣ ಉಪಯೋಗಿಸಿಕೊಂಡಿದ್ದಾರೆ. ಸರ್ಕಾರದ ಬಳಿ ಹಣ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಅಲ್ಲದೆ ಈ ಸರ್ಕಾರ ಪಾಪರ್ ಆಗಿದ್ದು, ಅವರ ಬಳಿ ದುಡ್ಡಿಲ್ಲ. ಎಸ್ಟಿಮೇಟ್ ಮಾಡದೇ ಗ್ಯಾರಂಟಿ ತಂದಿದ್ದಾರೆ. ಅದಕ್ಕೆ ಇವಾಗ ಹಣ ಹುಡುಕುತ್ತಿದ್ದಾರೆ. ನಾನೇ ಸರ್ಕಾರಕ್ಕೆ ಹೇಳಿದ್ದೇನೆ. ಒಕ್ಕಲಿಗರ ನಿಗಮ, ಬ್ರಾಹ್ಮಣರು, ಲಿಂಗಾಯಿತರ ನಿಗಮದ ಹಣ ಇದೆ ಎಲ್ಲವನ್ನೂ ಬಳಸಿಕೊಳ್ಳಿ. ಇಲ್ಲಾ ಅಂದರೆ ನಿಮ್ಮ ಬಾಳು ಬೀದಿಗೆ ಬರುತ್ತದೆ. ಈ ಸರ್ಕಾರ ಕೋಮಾಸ್ಟೇಜ್ ನಲ್ಲಿದೆ. ಅಲ್ಲದೆ ಈ ಸರ್ಕಾರ ಹಗರಣಗಳಲ್ಲಿ ಸಿಲುಕಿಕೊಂಡಿದೆ. ಹೊರಗಡೆ ಬರಲು ಆಗುತ್ತಿಲ್ಲ. ದಾರಿ ಕೂಡ ಕಾಣದಾಗಿದೆ. ಎಲ್ಲಾ ದಲಿತರ ಹಣ ಉಪಯೋಗಿಸಿಕೊಳ್ಳುತ್ತಿದ್ದಾರೆ. ವಾಲ್ಮೀಕಿ, ಮುಡಾ ದಲ್ಲೂ ದಲಿತರ ಹಣವೇ. ದಲಿತರ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ರಾಜ್ಯ ಸರ್ಕಾರಕ್ಕೆ ಮರ್ಯಾದೆ ಇಲ್ಲ. ತಪ್ಪಿಸಿಕೊಳ್ಳುವ ದಾರಿ ಇಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…