ಹಾಸನ

ನಾನೇ ಒಕ್ಕಲಿಗರು, ಬ್ರಾಹ್ಮಣರು, ಲಿಂಗಾಯತರ ನಿಗಮ ಹಣ ಬಳಸಿಕೊಳ್ಳಿ ಅಂತಾ ಹೇಳಿದ್ದೇನೆ ; ಆರ್.ಅಶೋಕ್ ಕಿಡಿ

ಹಾಸನ : ಒಕ್ಕಲಿಗರು, ಬ್ರಾಹ್ಮಣರು, ಲಿಂಗಾಯತರ ನಿಗಮ ಹಣವನ್ನೂ ಬಳಸಿಕೊಳ್ಳಿ ಅಂತಾ ಸರ್ಕಾರಕ್ಕೆ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬಳಿಕ ಮಾತನಾಡಿದ ಅವರು, ಸರ್ಕಾರ ಸ್ಕ್ಯಾಂಡಲ್‌ ಗಳಲ್ಲಿ ಸಿಲುಕಿಗೊಂಡಿದೆ. ಅದರಿಂದ ಹೊರಬರಲು ಅವರಿಗೆ ಆಗ್ತಿಲ್ಲ. ಅದಕ್ಕೆ ಅದರಲ್ಲಿ ಬ್ಯುಸಿ ಇದ್ದಾರೆ. ನಾನು ಕಂದಾಯ ಸಚಿವನಾಗಿ ಮಳೆ ಹಾನಿಗೆ ತುರ್ತು ಪರಿಹಾರ ನೀಡಿದ್ದೆ. ಇಲ್ಲಿ ಪರಿಹಾರ ಕೊಡಲು ಇನ್ನು ಶುರು ಮಾಡಿಲ್ಲ. ಕೇಂದ್ರ ಸರ್ಕಾರ ಕೊಟ್ಟಿರುವ ಹಣವನ್ನು ಇವರು ಕೊಡುತ್ತಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟಿರುವುದನ್ನು ನೀಡಿ ಕೈ ಚೆಲ್ಲಿ ಕೂರಬಾರದು. ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಸರ್ಕಾರ ಪಾಪರ್‌ ಆಗಿದೆ. ಕಳೆದ ಆರೇಳು ತಿಂಗಳಿಂದ ಅದೇ ಸ್ಥಿತಿಯಲ್ಲಿದೆ. ಈಗ ಗ್ಯಾರೆಂಟಿಗಾಗಿ ಟ್ಯಾಕ್ಸ್‌ ಹಾಕುತ್ತಿದ್ದಾರೆ. ದಲಿತರ ಹಣ ಉಪಯೋಗಿಸಿಕೊಂಡಿದ್ದಾರೆ. ಸರ್ಕಾರದ ಬಳಿ ಹಣ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೆ ಈ ಸರ್ಕಾರ ಪಾಪರ್‌ ಆಗಿದ್ದು, ಅವರ ಬಳಿ ದುಡ್ಡಿಲ್ಲ. ಎಸ್ಟಿಮೇಟ್‌ ಮಾಡದೇ ಗ್ಯಾರಂಟಿ ತಂದಿದ್ದಾರೆ. ಅದಕ್ಕೆ ಇವಾಗ ಹಣ ಹುಡುಕುತ್ತಿದ್ದಾರೆ. ನಾನೇ ಸರ್ಕಾರಕ್ಕೆ ಹೇಳಿದ್ದೇನೆ. ಒಕ್ಕಲಿಗರ ನಿಗಮ, ಬ್ರಾಹ್ಮಣರು, ಲಿಂಗಾಯಿತರ ನಿಗಮದ ಹಣ ಇದೆ ಎಲ್ಲವನ್ನೂ ಬಳಸಿಕೊಳ್ಳಿ. ಇಲ್ಲಾ ಅಂದರೆ ನಿಮ್ಮ ಬಾಳು ಬೀದಿಗೆ ಬರುತ್ತದೆ. ಈ ಸರ್ಕಾರ ಕೋಮಾಸ್ಟೇಜ್‌ ನಲ್ಲಿದೆ. ಅಲ್ಲದೆ ಈ ಸರ್ಕಾರ ಹಗರಣಗಳಲ್ಲಿ ಸಿಲುಕಿಕೊಂಡಿದೆ. ಹೊರಗಡೆ ಬರಲು ಆಗುತ್ತಿಲ್ಲ.  ದಾರಿ ಕೂಡ ಕಾಣದಾಗಿದೆ. ಎಲ್ಲಾ ದಲಿತರ ಹಣ ಉಪಯೋಗಿಸಿಕೊಳ್ಳುತ್ತಿದ್ದಾರೆ.  ವಾಲ್ಮೀಕಿ, ಮುಡಾ ದಲ್ಲೂ ದಲಿತರ ಹಣವೇ. ದಲಿತರ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ರಾಜ್ಯ ಸರ್ಕಾರಕ್ಕೆ ಮರ್ಯಾದೆ ಇಲ್ಲ. ತಪ್ಪಿಸಿಕೊಳ್ಳುವ ದಾರಿ ಇಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

5 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

5 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

5 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

5 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

5 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

5 hours ago