ಹಾಸನ

ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್

ಹಾಸನ : ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡಿದ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ತಮ್ಮ ಕುಟುಂಬಸ್ಥರ ಜೊತೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ.

ಹಾಸನದ ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಬಾನು ಮುಷ್ತಾಕ್ ಚಿಕ್ಕ ವಯಸ್ಸಿನಿಂದಲೇ ಸಾಹಿತ್ಯ ಮತ್ತು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದರು. ಪತ್ರಕರ್ತೆಯಾಗಿ, ನ್ಯಾಯವಾದಿಯಾಗಿ ಮತ್ತು ಹೋರಾಟಗಾರ್ತಿಯಾಗಿ ಅವರು ಕರ್ನಾಟಕದಲ್ಲಿ ಮೂಲಭೂತವಾದಿ ಚಿಂತನೆಗಳು ಮತ್ತು ಸಾಮಾಜಿಕ ಅನ್ಯಾಯಗಳ ವಿರುದ್ಧ ಹೋರಾಡಿದ್ದಾರೆ. ಇದೀಗ ಹಾಸನಾಂಬೆ ದೇವಿಯ ದರ್ಶನ ಪಡೆಯುವ ಮೂಲಕ ಅವರು ಕೋಮು ಸೌಹಾರ್ದತೆಯನ್ನು ಮೆರೆದಿದ್ದಾರೆ.

ಇದನ್ನು ಓದಿ: ಭಾವತಂತು ತುಂಡಾದಂತೆ ಭಾಸವಾಗುತ್ತಿದೆ…. ಭೈರಪ್ಪ ಕುರಿತು ಬಾನುಮುಷ್ತಾಕ್‌ ಬರಹ

ಬಾಲ್ಯದಿಂದಲೂ ಬರುತ್ತಿದ್ದೇನೆ
ನಾನು ಚಿಕ್ಕವಳಿದ್ದಾಗ ನನ್ನ ತಾಯಿಯ ಕೈ ಬೆರಳು ಹಿಡಿದು ಇಲ್ಲಿಗೆ ಬರುತ್ತಿದ್ದ ದಿನಗಳು ನೆನಪಾದವು. ಇವತ್ತು ನಿಮ್ಮ ಧ್ಯಾನಕ್ಕೆ ಬಿದ್ದಿದ್ದೇನೆ. ಹಿಂದೆ ಮುಸ್ಲಿಂ ಸಮುದಾಯವೂ ಹಾಸನಾಂಬೆಯನ್ನು ಪೂಜಿಸುತ್ತಿದ್ದರು. ನಮ್ಮ ತಾಯಿಯ ಕಾಲದಲ್ಲಿ ದೇವಿಯನ್ನು ಹಸನ್ ಬಿ ಹುಸೇನ್ ಬೀ ಎಂಬ ನಂಬಿಕೆಯಲ್ಲಿ ಪರಿಚಯಿಸುತ್ತಿದ್ರು. ಆ ಕಾಲದಲ್ಲಿ ಮುಸ್ಲಿಂ ಪೂಜೆಯಂತೆ ಸಕ್ಕರೆ ಊದಿನ ಕಡ್ಡಿ ತಂದು ದೇವಿಗೆ ಪೂಜಿಸುತ್ತಿದ್ರು. ಅಂದು ಹೆಚ್ಚಿನ ಮುಸ್ಲಿಂ ಇಲ್ಲಿಗೆ ಬರುತ್ತಿದ್ದರು.. ಈಗಲೂ ಕೆಲವರು ಬರ್ತಾರೆ. ಹಾಸನಾಂಬೆ ಒಂದು ಉತ್ತಮ ಭಾವೈಕ್ಯತಾ ಜಾಗ. ಇದು ನಮ್ಮ ಊರ ಹಬ್ಬ. ನಾವೆಲ್ಲಾ ಈ ದೇವಿ ಜಾತ್ರೆಯಲ್ಲಿ ಸಂಭ್ರಮದಿಂದ ಭಾಗಿಯಾಗಬೇಕು ಎಂದರು.

ಈ ದಿನಗಳಲ್ಲಿ ದೇವಾಲಯದಲ್ಲಿ ನಡೆಯುವ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ, ಅವರು ತಮ್ಮ ಭಾವುಕತೆಯನ್ನು ವ್ಯಕ್ತಪಡಿಸಿದ್ದಾರೆ. ಈ ದರ್ಶನವು ನನಗೆ ಆಂತರಿಕ ಶಾಂತಿಯನ್ನು ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಬುಧವಾರ ಒಂದೇ ದಿನ ಭಕ್ತರ ಸಂಖ್ಯೆ ೨.೫೦ ಲಕ್ಷ ದಾಟಬಹುದು ಎಂದ ಅವರು ಎಷ್ಟೇ ಜನ ಬಂದರೂ ಎಲ್ಲರಿಗೂ ಸುಗಮ ದರ್ಶನ ಆಗಲಿದೆ. ಎಲ್ಲಾ ವ್ಯವಸ್ಥೆ ಸರಿಯಾಗಿದ್ದು ದರ್ಶನ ಪಡೆಯಲು ಜನರಿಗೆ ಸ್ವಲ್ಪ ಸಮಯ ಹೆಚ್ಚಾಗಲಿದೆ. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಗಂಟೆ ಸಮಯ ತಗುಲುತ್ತಿದ್ದು ಮುಂದಿನ ದಿನಗಳಲ್ಲಿ ಬರುವವರು ನಾಲ್ಕರಿಂದ ಐದು ಗಂಟೆ ಸರತಿ ಸಾಲಿನಲ್ಲಿ ನಿಲ್ಲಲು ತಯಾರಾಗಿ ಬನ್ನಿ ಎಂದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

7 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

7 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

7 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

7 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

8 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

8 hours ago