ಹಾಸನ

ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್

ಹಾಸನ : ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡಿದ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ತಮ್ಮ ಕುಟುಂಬಸ್ಥರ ಜೊತೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ.

ಹಾಸನದ ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಬಾನು ಮುಷ್ತಾಕ್ ಚಿಕ್ಕ ವಯಸ್ಸಿನಿಂದಲೇ ಸಾಹಿತ್ಯ ಮತ್ತು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದರು. ಪತ್ರಕರ್ತೆಯಾಗಿ, ನ್ಯಾಯವಾದಿಯಾಗಿ ಮತ್ತು ಹೋರಾಟಗಾರ್ತಿಯಾಗಿ ಅವರು ಕರ್ನಾಟಕದಲ್ಲಿ ಮೂಲಭೂತವಾದಿ ಚಿಂತನೆಗಳು ಮತ್ತು ಸಾಮಾಜಿಕ ಅನ್ಯಾಯಗಳ ವಿರುದ್ಧ ಹೋರಾಡಿದ್ದಾರೆ. ಇದೀಗ ಹಾಸನಾಂಬೆ ದೇವಿಯ ದರ್ಶನ ಪಡೆಯುವ ಮೂಲಕ ಅವರು ಕೋಮು ಸೌಹಾರ್ದತೆಯನ್ನು ಮೆರೆದಿದ್ದಾರೆ.

ಇದನ್ನು ಓದಿ: ಭಾವತಂತು ತುಂಡಾದಂತೆ ಭಾಸವಾಗುತ್ತಿದೆ…. ಭೈರಪ್ಪ ಕುರಿತು ಬಾನುಮುಷ್ತಾಕ್‌ ಬರಹ

ಬಾಲ್ಯದಿಂದಲೂ ಬರುತ್ತಿದ್ದೇನೆ
ನಾನು ಚಿಕ್ಕವಳಿದ್ದಾಗ ನನ್ನ ತಾಯಿಯ ಕೈ ಬೆರಳು ಹಿಡಿದು ಇಲ್ಲಿಗೆ ಬರುತ್ತಿದ್ದ ದಿನಗಳು ನೆನಪಾದವು. ಇವತ್ತು ನಿಮ್ಮ ಧ್ಯಾನಕ್ಕೆ ಬಿದ್ದಿದ್ದೇನೆ. ಹಿಂದೆ ಮುಸ್ಲಿಂ ಸಮುದಾಯವೂ ಹಾಸನಾಂಬೆಯನ್ನು ಪೂಜಿಸುತ್ತಿದ್ದರು. ನಮ್ಮ ತಾಯಿಯ ಕಾಲದಲ್ಲಿ ದೇವಿಯನ್ನು ಹಸನ್ ಬಿ ಹುಸೇನ್ ಬೀ ಎಂಬ ನಂಬಿಕೆಯಲ್ಲಿ ಪರಿಚಯಿಸುತ್ತಿದ್ರು. ಆ ಕಾಲದಲ್ಲಿ ಮುಸ್ಲಿಂ ಪೂಜೆಯಂತೆ ಸಕ್ಕರೆ ಊದಿನ ಕಡ್ಡಿ ತಂದು ದೇವಿಗೆ ಪೂಜಿಸುತ್ತಿದ್ರು. ಅಂದು ಹೆಚ್ಚಿನ ಮುಸ್ಲಿಂ ಇಲ್ಲಿಗೆ ಬರುತ್ತಿದ್ದರು.. ಈಗಲೂ ಕೆಲವರು ಬರ್ತಾರೆ. ಹಾಸನಾಂಬೆ ಒಂದು ಉತ್ತಮ ಭಾವೈಕ್ಯತಾ ಜಾಗ. ಇದು ನಮ್ಮ ಊರ ಹಬ್ಬ. ನಾವೆಲ್ಲಾ ಈ ದೇವಿ ಜಾತ್ರೆಯಲ್ಲಿ ಸಂಭ್ರಮದಿಂದ ಭಾಗಿಯಾಗಬೇಕು ಎಂದರು.

ಈ ದಿನಗಳಲ್ಲಿ ದೇವಾಲಯದಲ್ಲಿ ನಡೆಯುವ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ, ಅವರು ತಮ್ಮ ಭಾವುಕತೆಯನ್ನು ವ್ಯಕ್ತಪಡಿಸಿದ್ದಾರೆ. ಈ ದರ್ಶನವು ನನಗೆ ಆಂತರಿಕ ಶಾಂತಿಯನ್ನು ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಬುಧವಾರ ಒಂದೇ ದಿನ ಭಕ್ತರ ಸಂಖ್ಯೆ ೨.೫೦ ಲಕ್ಷ ದಾಟಬಹುದು ಎಂದ ಅವರು ಎಷ್ಟೇ ಜನ ಬಂದರೂ ಎಲ್ಲರಿಗೂ ಸುಗಮ ದರ್ಶನ ಆಗಲಿದೆ. ಎಲ್ಲಾ ವ್ಯವಸ್ಥೆ ಸರಿಯಾಗಿದ್ದು ದರ್ಶನ ಪಡೆಯಲು ಜನರಿಗೆ ಸ್ವಲ್ಪ ಸಮಯ ಹೆಚ್ಚಾಗಲಿದೆ. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಗಂಟೆ ಸಮಯ ತಗುಲುತ್ತಿದ್ದು ಮುಂದಿನ ದಿನಗಳಲ್ಲಿ ಬರುವವರು ನಾಲ್ಕರಿಂದ ಐದು ಗಂಟೆ ಸರತಿ ಸಾಲಿನಲ್ಲಿ ನಿಲ್ಲಲು ತಯಾರಾಗಿ ಬನ್ನಿ ಎಂದರು.

ಆಂದೋಲನ ಡೆಸ್ಕ್

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

56 mins ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

1 hour ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

1 hour ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

1 hour ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

12 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

12 hours ago