ಹಾಸನ

ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್

ಹಾಸನ : ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡಿದ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ತಮ್ಮ ಕುಟುಂಬಸ್ಥರ ಜೊತೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ.

ಹಾಸನದ ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಬಾನು ಮುಷ್ತಾಕ್ ಚಿಕ್ಕ ವಯಸ್ಸಿನಿಂದಲೇ ಸಾಹಿತ್ಯ ಮತ್ತು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದರು. ಪತ್ರಕರ್ತೆಯಾಗಿ, ನ್ಯಾಯವಾದಿಯಾಗಿ ಮತ್ತು ಹೋರಾಟಗಾರ್ತಿಯಾಗಿ ಅವರು ಕರ್ನಾಟಕದಲ್ಲಿ ಮೂಲಭೂತವಾದಿ ಚಿಂತನೆಗಳು ಮತ್ತು ಸಾಮಾಜಿಕ ಅನ್ಯಾಯಗಳ ವಿರುದ್ಧ ಹೋರಾಡಿದ್ದಾರೆ. ಇದೀಗ ಹಾಸನಾಂಬೆ ದೇವಿಯ ದರ್ಶನ ಪಡೆಯುವ ಮೂಲಕ ಅವರು ಕೋಮು ಸೌಹಾರ್ದತೆಯನ್ನು ಮೆರೆದಿದ್ದಾರೆ.

ಇದನ್ನು ಓದಿ: ಭಾವತಂತು ತುಂಡಾದಂತೆ ಭಾಸವಾಗುತ್ತಿದೆ…. ಭೈರಪ್ಪ ಕುರಿತು ಬಾನುಮುಷ್ತಾಕ್‌ ಬರಹ

ಬಾಲ್ಯದಿಂದಲೂ ಬರುತ್ತಿದ್ದೇನೆ
ನಾನು ಚಿಕ್ಕವಳಿದ್ದಾಗ ನನ್ನ ತಾಯಿಯ ಕೈ ಬೆರಳು ಹಿಡಿದು ಇಲ್ಲಿಗೆ ಬರುತ್ತಿದ್ದ ದಿನಗಳು ನೆನಪಾದವು. ಇವತ್ತು ನಿಮ್ಮ ಧ್ಯಾನಕ್ಕೆ ಬಿದ್ದಿದ್ದೇನೆ. ಹಿಂದೆ ಮುಸ್ಲಿಂ ಸಮುದಾಯವೂ ಹಾಸನಾಂಬೆಯನ್ನು ಪೂಜಿಸುತ್ತಿದ್ದರು. ನಮ್ಮ ತಾಯಿಯ ಕಾಲದಲ್ಲಿ ದೇವಿಯನ್ನು ಹಸನ್ ಬಿ ಹುಸೇನ್ ಬೀ ಎಂಬ ನಂಬಿಕೆಯಲ್ಲಿ ಪರಿಚಯಿಸುತ್ತಿದ್ರು. ಆ ಕಾಲದಲ್ಲಿ ಮುಸ್ಲಿಂ ಪೂಜೆಯಂತೆ ಸಕ್ಕರೆ ಊದಿನ ಕಡ್ಡಿ ತಂದು ದೇವಿಗೆ ಪೂಜಿಸುತ್ತಿದ್ರು. ಅಂದು ಹೆಚ್ಚಿನ ಮುಸ್ಲಿಂ ಇಲ್ಲಿಗೆ ಬರುತ್ತಿದ್ದರು.. ಈಗಲೂ ಕೆಲವರು ಬರ್ತಾರೆ. ಹಾಸನಾಂಬೆ ಒಂದು ಉತ್ತಮ ಭಾವೈಕ್ಯತಾ ಜಾಗ. ಇದು ನಮ್ಮ ಊರ ಹಬ್ಬ. ನಾವೆಲ್ಲಾ ಈ ದೇವಿ ಜಾತ್ರೆಯಲ್ಲಿ ಸಂಭ್ರಮದಿಂದ ಭಾಗಿಯಾಗಬೇಕು ಎಂದರು.

ಈ ದಿನಗಳಲ್ಲಿ ದೇವಾಲಯದಲ್ಲಿ ನಡೆಯುವ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ, ಅವರು ತಮ್ಮ ಭಾವುಕತೆಯನ್ನು ವ್ಯಕ್ತಪಡಿಸಿದ್ದಾರೆ. ಈ ದರ್ಶನವು ನನಗೆ ಆಂತರಿಕ ಶಾಂತಿಯನ್ನು ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಬುಧವಾರ ಒಂದೇ ದಿನ ಭಕ್ತರ ಸಂಖ್ಯೆ ೨.೫೦ ಲಕ್ಷ ದಾಟಬಹುದು ಎಂದ ಅವರು ಎಷ್ಟೇ ಜನ ಬಂದರೂ ಎಲ್ಲರಿಗೂ ಸುಗಮ ದರ್ಶನ ಆಗಲಿದೆ. ಎಲ್ಲಾ ವ್ಯವಸ್ಥೆ ಸರಿಯಾಗಿದ್ದು ದರ್ಶನ ಪಡೆಯಲು ಜನರಿಗೆ ಸ್ವಲ್ಪ ಸಮಯ ಹೆಚ್ಚಾಗಲಿದೆ. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಗಂಟೆ ಸಮಯ ತಗುಲುತ್ತಿದ್ದು ಮುಂದಿನ ದಿನಗಳಲ್ಲಿ ಬರುವವರು ನಾಲ್ಕರಿಂದ ಐದು ಗಂಟೆ ಸರತಿ ಸಾಲಿನಲ್ಲಿ ನಿಲ್ಲಲು ತಯಾರಾಗಿ ಬನ್ನಿ ಎಂದರು.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago