ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ.
೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ ಹೊಂದಿಕೊಂಡಿದ್ದಿದ್ದ ಸುದೀಂದ್ರ ಹಾಗೂ ರಾಮು ಎಂಬುವವರ ೮೦೦ ಚದರ ಅಡಿ ಭೂಮಿಯನ್ನ ಹೋಟೆಲ್ ನಿರ್ಮಾಣಕ್ಕಾಗಿ ಪ್ರವಾಸೋಧ್ಯಮ ಇಲಾಖೆ ಭೂಸ್ವಾಧೀನ ಪಡಿಸಿಕೊಂಡಿತ್ತು. ಈ ವೇಳೆ ಪ್ರತಿ ಚದರ ಅಡಿಗೆ ಇಲಾಖೆ ೨೭೭ ರೂಗಳಂತೆ ಪರಿಹಾರ ನೀಡಿತ್ತು. ಹೆಚ್ಚಿನ ಪರಿಹಾರ ನೀಡುವಂತೆ ಜಾಗದ ಮಾಲೀಕರು ನ್ಯಾಯಾಲಯದ ಮೋರೆ ಹೋಗಿದ್ದರು.
ಸುದೀರ್ಘವಾದ ವಿಚಾರಣೆ ನಂತರ ಚದರ ಅಡಿಗೆ ೯೫೦ ರೂ ನಂತೆ ೧.೭೫ ಕೋಟಿ ಪರಿಹಾರ ನೀಡಬೇಕು ಎಂದು ಅಂದಿನ ಭೂ ಸ್ವಾದೀನಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶ ಮಾಡಿತ್ತು. ಈ ತೀರ್ಪು ಪ್ರಕಟಕೊಂಡು ೭ ವರ್ಷಗಳು ಕಳೆದರೂ ಪರಿಹಾರ ಮಾತ್ರ ನೀಡುತ್ತಿಲ್ಲ. ಹೀಗಾಗಿ ಉಪವಿಭಾಗಾಧಿಕಾರಿ ಕಚೇರಿ ಜಪ್ತಿಗೆ ಬೇಲೂರು ನ್ಯಾಯಾಲಯ ಆದೇಶ ಮಾಡಿತ್ತು. ಆದೇಶದ ಅನ್ವಯ ೨ ಲಾರಿಗಳಲ್ಲಿ ಅಧಿಕಾರಿಗಳು ಕಚೇರಿಯ ಪೀಠೋಪಕರಣಗಳನ್ನ ತುಂಬಿಕೊಂಡು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ.
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…