ಹಾಸನ

ಸಕಲೇಶಪುರ ತಹಶೀಲ್ದಾರ್ ಕಚೇರಿಯ ವಾಹನ, ಪೀರೋಪಕರಣ ಜಪ್ತಿ

ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ  ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್‌ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ.

೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ ಹೊಂದಿಕೊಂಡಿದ್ದಿದ್ದ ಸುದೀಂದ್ರ ಹಾಗೂ ರಾಮು  ಎಂಬುವವರ ೮೦೦ ಚದರ ಅಡಿ ಭೂಮಿಯನ್ನ ಹೋಟೆಲ್‌ ನಿರ್ಮಾಣಕ್ಕಾಗಿ ಪ್ರವಾಸೋಧ್ಯಮ ಇಲಾಖೆ ಭೂಸ್ವಾಧೀನ ಪಡಿಸಿಕೊಂಡಿತ್ತು. ಈ ವೇಳೆ ಪ್ರತಿ ಚದರ ಅಡಿಗೆ ಇಲಾಖೆ ೨೭೭ ರೂಗಳಂತೆ ಪರಿಹಾರ ನೀಡಿತ್ತು. ಹೆಚ್ಚಿನ ಪರಿಹಾರ ನೀಡುವಂತೆ ಜಾಗದ ಮಾಲೀಕರು ನ್ಯಾಯಾಲಯದ ಮೋರೆ ಹೋಗಿದ್ದರು.

ಸುದೀರ್ಘವಾದ ವಿಚಾರಣೆ ನಂತರ ಚದರ ಅಡಿಗೆ ೯೫೦ ರೂ ನಂತೆ ೧.೭೫ ಕೋಟಿ ಪರಿಹಾರ ನೀಡಬೇಕು ಎಂದು ಅಂದಿನ ಭೂ ಸ್ವಾದೀನಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶ ಮಾಡಿತ್ತು. ಈ ತೀರ್ಪು ಪ್ರಕಟಕೊಂಡು ೭ ವರ್ಷಗಳು ಕಳೆದರೂ ಪರಿಹಾರ ಮಾತ್ರ ನೀಡುತ್ತಿಲ್ಲ. ಹೀಗಾಗಿ ಉಪವಿಭಾಗಾಧಿಕಾರಿ ಕಚೇರಿ ಜಪ್ತಿಗೆ ಬೇಲೂರು ನ್ಯಾಯಾಲಯ ಆದೇಶ ಮಾಡಿತ್ತು. ಆದೇಶದ ಅನ್ವಯ ೨ ಲಾರಿಗಳಲ್ಲಿ ಅಧಿಕಾರಿಗಳು ಕಚೇರಿಯ ಪೀಠೋಪಕರಣಗಳನ್ನ ತುಂಬಿಕೊಂಡು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

3 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

3 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

4 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

4 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

4 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

4 hours ago