ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ.
೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ ಹೊಂದಿಕೊಂಡಿದ್ದಿದ್ದ ಸುದೀಂದ್ರ ಹಾಗೂ ರಾಮು ಎಂಬುವವರ ೮೦೦ ಚದರ ಅಡಿ ಭೂಮಿಯನ್ನ ಹೋಟೆಲ್ ನಿರ್ಮಾಣಕ್ಕಾಗಿ ಪ್ರವಾಸೋಧ್ಯಮ ಇಲಾಖೆ ಭೂಸ್ವಾಧೀನ ಪಡಿಸಿಕೊಂಡಿತ್ತು. ಈ ವೇಳೆ ಪ್ರತಿ ಚದರ ಅಡಿಗೆ ಇಲಾಖೆ ೨೭೭ ರೂಗಳಂತೆ ಪರಿಹಾರ ನೀಡಿತ್ತು. ಹೆಚ್ಚಿನ ಪರಿಹಾರ ನೀಡುವಂತೆ ಜಾಗದ ಮಾಲೀಕರು ನ್ಯಾಯಾಲಯದ ಮೋರೆ ಹೋಗಿದ್ದರು.
ಸುದೀರ್ಘವಾದ ವಿಚಾರಣೆ ನಂತರ ಚದರ ಅಡಿಗೆ ೯೫೦ ರೂ ನಂತೆ ೧.೭೫ ಕೋಟಿ ಪರಿಹಾರ ನೀಡಬೇಕು ಎಂದು ಅಂದಿನ ಭೂ ಸ್ವಾದೀನಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶ ಮಾಡಿತ್ತು. ಈ ತೀರ್ಪು ಪ್ರಕಟಕೊಂಡು ೭ ವರ್ಷಗಳು ಕಳೆದರೂ ಪರಿಹಾರ ಮಾತ್ರ ನೀಡುತ್ತಿಲ್ಲ. ಹೀಗಾಗಿ ಉಪವಿಭಾಗಾಧಿಕಾರಿ ಕಚೇರಿ ಜಪ್ತಿಗೆ ಬೇಲೂರು ನ್ಯಾಯಾಲಯ ಆದೇಶ ಮಾಡಿತ್ತು. ಆದೇಶದ ಅನ್ವಯ ೨ ಲಾರಿಗಳಲ್ಲಿ ಅಧಿಕಾರಿಗಳು ಕಚೇರಿಯ ಪೀಠೋಪಕರಣಗಳನ್ನ ತುಂಬಿಕೊಂಡು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…