ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ.
೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ ಹೊಂದಿಕೊಂಡಿದ್ದಿದ್ದ ಸುದೀಂದ್ರ ಹಾಗೂ ರಾಮು ಎಂಬುವವರ ೮೦೦ ಚದರ ಅಡಿ ಭೂಮಿಯನ್ನ ಹೋಟೆಲ್ ನಿರ್ಮಾಣಕ್ಕಾಗಿ ಪ್ರವಾಸೋಧ್ಯಮ ಇಲಾಖೆ ಭೂಸ್ವಾಧೀನ ಪಡಿಸಿಕೊಂಡಿತ್ತು. ಈ ವೇಳೆ ಪ್ರತಿ ಚದರ ಅಡಿಗೆ ಇಲಾಖೆ ೨೭೭ ರೂಗಳಂತೆ ಪರಿಹಾರ ನೀಡಿತ್ತು. ಹೆಚ್ಚಿನ ಪರಿಹಾರ ನೀಡುವಂತೆ ಜಾಗದ ಮಾಲೀಕರು ನ್ಯಾಯಾಲಯದ ಮೋರೆ ಹೋಗಿದ್ದರು.
ಸುದೀರ್ಘವಾದ ವಿಚಾರಣೆ ನಂತರ ಚದರ ಅಡಿಗೆ ೯೫೦ ರೂ ನಂತೆ ೧.೭೫ ಕೋಟಿ ಪರಿಹಾರ ನೀಡಬೇಕು ಎಂದು ಅಂದಿನ ಭೂ ಸ್ವಾದೀನಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶ ಮಾಡಿತ್ತು. ಈ ತೀರ್ಪು ಪ್ರಕಟಕೊಂಡು ೭ ವರ್ಷಗಳು ಕಳೆದರೂ ಪರಿಹಾರ ಮಾತ್ರ ನೀಡುತ್ತಿಲ್ಲ. ಹೀಗಾಗಿ ಉಪವಿಭಾಗಾಧಿಕಾರಿ ಕಚೇರಿ ಜಪ್ತಿಗೆ ಬೇಲೂರು ನ್ಯಾಯಾಲಯ ಆದೇಶ ಮಾಡಿತ್ತು. ಆದೇಶದ ಅನ್ವಯ ೨ ಲಾರಿಗಳಲ್ಲಿ ಅಧಿಕಾರಿಗಳು ಕಚೇರಿಯ ಪೀಠೋಪಕರಣಗಳನ್ನ ತುಂಬಿಕೊಂಡು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ.
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…