hasana marriage
ಹಾಸನ : ಮಹೂರ್ತದ ವೇಳೆ ಹಸೆಮಣೆಯಿಂದ ವಧು ಹೊರ ನಡೆದಿರುವಂತಹ ಘಟನೆ ನಗರದ ಶ್ರೀಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ(ಮೇ.23) ನಡೆದಿದೆ.
ಹಾಸನದ ಬೂವನಹಳ್ಳಿಯ ಯುವತಿ ಪಲ್ಲವಿ ಮತ್ತು ಆಲೂರು ತಾಲೂಕಿನ ಈಶ್ವರಹಳ್ಳಿ ಕೊಡುಗೆ ಗ್ರಾಮದ ಯುವಕ, ಶಿಕ್ಷಕ ವೇಣುಗೋಪಾಲ್ ಮದುವೆ ಶುಕ್ರವಾರ ನಿಗದಿಯಾಗಿತ್ತು. ಅದರಂತೆ ಎಲ್ಲಾ ಕೈಂಕರ್ಯಗಳು ನೆರವೇರಿದ್ದವು. ತಾಳಿ ಕಟ್ಟುವ ಕೆಲ ಕ್ಷಣಗಳ ಮುನ್ನ ವಧುವಿಗೆ ದೂರವಾಣಿ ಕರೆಯೊಂದು ಬಂತು. ತಕ್ಷಣವೇ ನನಗೆ ಈ ಮದುವೆ ಬೇಡ ಎಂದು ವಧು ಹಸೆಮಣೆ ಮೇಲಿಂದ ಎದ್ದು ಕೊಠಡಿ ಸೇರಿಕೊಂಡರು.
ಪೋಷಕರು ಮನವೊಲಿಸಿದರೂ ಯುವತಿ ಮದುವೆಗೆ ಒಪ್ಪಲಿಲ್ಲ. ವರನ ಕಡೆಯವರೂ ನಮಗೂ ಈ ಮದುವೆ ಬೇಡ ಎಂದು ಹೊರಟರು. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಅಹಿತಕರ ಬೆಳವಣಿಗೆ ತಡೆದಿದ್ದಾರೆ.
ಯುವತಿ ಪಲ್ಲವಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಪ್ರಿಯಕರನ ಕರೆ ಬಂದ ತಕ್ಷಣ ಮದುವೆ ಬೇಡ ಎಂದು ಪಲ್ಲವಿ ಹಸೆಮಣೆ ಬಿಟ್ಟು ಮೇಲೆದ್ದರು ಎನ್ನಲಾಗಿದೆ.
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…