hasana marriage
ಹಾಸನ : ಮಹೂರ್ತದ ವೇಳೆ ಹಸೆಮಣೆಯಿಂದ ವಧು ಹೊರ ನಡೆದಿರುವಂತಹ ಘಟನೆ ನಗರದ ಶ್ರೀಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ(ಮೇ.23) ನಡೆದಿದೆ.
ಹಾಸನದ ಬೂವನಹಳ್ಳಿಯ ಯುವತಿ ಪಲ್ಲವಿ ಮತ್ತು ಆಲೂರು ತಾಲೂಕಿನ ಈಶ್ವರಹಳ್ಳಿ ಕೊಡುಗೆ ಗ್ರಾಮದ ಯುವಕ, ಶಿಕ್ಷಕ ವೇಣುಗೋಪಾಲ್ ಮದುವೆ ಶುಕ್ರವಾರ ನಿಗದಿಯಾಗಿತ್ತು. ಅದರಂತೆ ಎಲ್ಲಾ ಕೈಂಕರ್ಯಗಳು ನೆರವೇರಿದ್ದವು. ತಾಳಿ ಕಟ್ಟುವ ಕೆಲ ಕ್ಷಣಗಳ ಮುನ್ನ ವಧುವಿಗೆ ದೂರವಾಣಿ ಕರೆಯೊಂದು ಬಂತು. ತಕ್ಷಣವೇ ನನಗೆ ಈ ಮದುವೆ ಬೇಡ ಎಂದು ವಧು ಹಸೆಮಣೆ ಮೇಲಿಂದ ಎದ್ದು ಕೊಠಡಿ ಸೇರಿಕೊಂಡರು.
ಪೋಷಕರು ಮನವೊಲಿಸಿದರೂ ಯುವತಿ ಮದುವೆಗೆ ಒಪ್ಪಲಿಲ್ಲ. ವರನ ಕಡೆಯವರೂ ನಮಗೂ ಈ ಮದುವೆ ಬೇಡ ಎಂದು ಹೊರಟರು. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಅಹಿತಕರ ಬೆಳವಣಿಗೆ ತಡೆದಿದ್ದಾರೆ.
ಯುವತಿ ಪಲ್ಲವಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಪ್ರಿಯಕರನ ಕರೆ ಬಂದ ತಕ್ಷಣ ಮದುವೆ ಬೇಡ ಎಂದು ಪಲ್ಲವಿ ಹಸೆಮಣೆ ಬಿಟ್ಟು ಮೇಲೆದ್ದರು ಎನ್ನಲಾಗಿದೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…