ಹಾಸನ : ಇಬ್ಬರು ವ್ಯಕ್ತಿಗಳ ನಡುವೆ ಮದ್ಯ ಕುಡಿಯುವ ಸ್ಪರ್ಧೆ ನಡೆದು ಮಿತಿ ಮೀರಿ ಕುಡಿದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ನಡೆದಿದೆ.
ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳ ನಡುವೆ ಅರ್ಧ ಗಂಟೆಯಲ್ಲಿ ಒಂದು ಲೀಟರ್ ಮದ್ಯ ಕುಡಿಯುವ ಸ್ಪರ್ಧೆ ಏರ್ಪಟ್ಟಿದೆ. ಸ್ಪರ್ಧೆಯಲ್ಲಿ ಹೆಚ್ಚು ಮದ್ಯ ಸೇವನೆ ಮಾಡಿದ ತಿಮ್ಮೇಗೌಡ (60) ಎಂಬಾತ ಸಾವಿಗೀಡಾಗಿದ್ದಾರೆ. ಮೃತ ತಿಮ್ಮೇಗೌಡ ಹಾಗೂ ದೇವರಾಜ ನಡುವೆ ಈ ಸ್ಪರ್ಧೆ ಏರ್ಪಟ್ಟಿತ್ತು. ಈ ಇಬ್ಬರಿಗೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕೃಷ್ಣೇಗೌಡ ಮದ್ಯದ ಪ್ಯಾಕೆಟ್ಗಳನ್ನು ನೀಡಿದ್ದರು ಎನ್ನಲಾಗಿದೆ.
ತಿಮ್ಮೇಗೌಡನಿಗೆ ಮದ್ಯ ವಿಪರೀತವಾಗುತ್ತಿದ್ದಂತೆ ಬಾಯಲ್ಲಿ ರಕ್ತ ಬರಲಾರಂಭಿಸಿದೆ. ಬಳಿಕ ದೇವರಾಜು ಮತ್ತು ಕೃಷ್ಣೇಗೌಡ ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ಅಸ್ವಸ್ಥವಾಗಿ ಬಿದ್ದಿದ್ದ ಆತನನ್ನು ಗ್ರಾಮಸ್ಥರು ಎತ್ತಿಕೊಂಡು ಬಂದು ಮನೆಯಲ್ಲಿ ಮಲಗಿಸಿದ್ದರು. ಈ ವೇಳೆ ತಿಮ್ಮೇಗೌಡ ಸಾವಿಗೀಡಾಗಿದ್ದಾರೆ.
ಈ ಸಂಬಂಧ ತಿಮ್ಮೇಗೌಡನ ಪುತ್ರಿ, ದೇವರಾಜು ಹಾಗೂ ಕೃಷ್ಣೇಗೌಡನ ವಿರುದ್ಧ ದೂರು ದಾಖಲಿಸಿದ್ದಾರೆ. ಅಲ್ಲದೇ ಅಕ್ರಮ ಮದ್ಯ ಮಾರಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…