ಹಾಸನ

ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್ : ಓರ್ವ ಸಾವು

ಹಾಸನ : ಇಬ್ಬರು ವ್ಯಕ್ತಿಗಳ ನಡುವೆ ಮದ್ಯ ಕುಡಿಯುವ ಸ್ಪರ್ಧೆ ನಡೆದು ಮಿತಿ ಮೀರಿ ಕುಡಿದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ನಡೆದಿದೆ.

ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳ ನಡುವೆ ಅರ್ಧ ಗಂಟೆಯಲ್ಲಿ ಒಂದು ಲೀಟರ್ ಮದ್ಯ ಕುಡಿಯುವ ಸ್ಪರ್ಧೆ ಏರ್ಪಟ್ಟಿದೆ. ಸ್ಪರ್ಧೆಯಲ್ಲಿ ಹೆಚ್ಚು ಮದ್ಯ ಸೇವನೆ ಮಾಡಿದ ತಿಮ್ಮೇಗೌಡ (60) ಎಂಬಾತ ಸಾವಿಗೀಡಾಗಿದ್ದಾರೆ. ಮೃತ ತಿಮ್ಮೇಗೌಡ ಹಾಗೂ ದೇವರಾಜ ನಡುವೆ ಈ ಸ್ಪರ್ಧೆ ಏರ್ಪಟ್ಟಿತ್ತು. ಈ ಇಬ್ಬರಿಗೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕೃಷ್ಣೇಗೌಡ ಮದ್ಯದ ಪ್ಯಾಕೆಟ್‍ಗಳನ್ನು ನೀಡಿದ್ದರು ಎನ್ನಲಾಗಿದೆ.

ತಿಮ್ಮೇಗೌಡನಿಗೆ ಮದ್ಯ ವಿಪರೀತವಾಗುತ್ತಿದ್ದಂತೆ ಬಾಯಲ್ಲಿ ರಕ್ತ ಬರಲಾರಂಭಿಸಿದೆ. ಬಳಿಕ ದೇವರಾಜು ಮತ್ತು ಕೃಷ್ಣೇಗೌಡ ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ಅಸ್ವಸ್ಥವಾಗಿ ಬಿದ್ದಿದ್ದ ಆತನನ್ನು ಗ್ರಾಮಸ್ಥರು ಎತ್ತಿಕೊಂಡು ಬಂದು ಮನೆಯಲ್ಲಿ ಮಲಗಿಸಿದ್ದರು. ಈ ವೇಳೆ ತಿಮ್ಮೇಗೌಡ ಸಾವಿಗೀಡಾಗಿದ್ದಾರೆ.

ಈ ಸಂಬಂಧ ತಿಮ್ಮೇಗೌಡನ ಪುತ್ರಿ, ದೇವರಾಜು ಹಾಗೂ ಕೃಷ್ಣೇಗೌಡನ ವಿರುದ್ಧ ದೂರು ದಾಖಲಿಸಿದ್ದಾರೆ. ಅಲ್ಲದೇ ಅಕ್ರಮ ಮದ್ಯ ಮಾರಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

lokesh

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

30 mins ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

40 mins ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

49 mins ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

2 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

2 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

3 hours ago